<p><strong>ತುಮಕೂರು</strong>: ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ನಿಂದ ಜ.21 ಮತ್ತು 22 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಕಾನೂನು ಸಲಹೆಗಾರ ಎನ್.ಶಿವಣ್ಣ ತಿಳಿಸಿದರು.</p>.<p>ರಾಜ್ಯದ ವಿವಿಧೆಡೆಯಿಂದ ನೌಕರರು ಜ.21 ರಂದು ಬೆಳಿಗ್ಗೆ 7ಕ್ಕೆ ತುಮಕೂರು ರೈಲು ಇಲ್ದಾಣದಲ್ಲಿ ಸೇರಲಿದ್ದಾರೆ. ಅಲ್ಲಿಂದ ರೈಲಿನಲ್ಲಿ ಬೆಂಗಳೂರು ತೆರಳಲಿದ್ದೇವೆ. ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಬಿಸಿಯೂಟ ನೌಕರರು ಕಳೆದ 17 ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕನಿಷ್ಠ ವೇತನ ಮತ್ತು ಇತರೆ ಸೌಲಭ್ಯಗಳಿಂದ ವಂಚಿತರಾಗಿ ದುಡಿಯುತ್ತಿದ್ದಾರೆ. ಕರ್ನಾಟಕದಲ್ಲಿ ಮುಖ್ಯ ಅಡುಗೆಯವರಿಗೆ ₹2700 ಹಾಗೂ ಅಡುಗೆ ಸಹಾಯಕರಿಗೆ ₹2600 ಮಾತ್ರ ನೀಡಲಾಗುತ್ತಿದೆ. ಈ ಅತ್ಯಲ್ವ ಹಣದಿಂದ ಜೀವನ ನಿರ್ವಹಿಸುವುದು ಹೇಗೆ ಎಂದು ಅವರು ಪ್ರಶ್ನಿಸಿದರು.</p>.<p>ಸರ್ಕಾರವು ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ಹುನ್ನಾರ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ 1 ಲಕ್ಷ 18 ಸಾವಿರ ಮಹಿಳೆಯರು ಕೆಲಸ ಕಳೆದುಕೊಂಡು ಬೀದಿಪಾಲಾಗಲಿದ್ದಾರೆ. ಸರ್ಕಾರಗಳು ಜನರಿಗೆ ಕೆಲಸ ಕೊಡಬೇಕೇ ವಿನಾಃ ಕೆಲಸ ಕಿತ್ತುಕೊಳ್ಳುವುದು ಶೋಭೆಯಲ್ಲ ಎಂದರು.</p>.<p>ಎಐಟಿಯುಸಿ ತುಮಕೂರು ಘಟಕದ ಅಧ್ಯಕ್ಷೆ ರಾಧಮ್ಮ ಮಾತನಾಡಿ, ‘ನಮಗೆ ಕೆಲಸ ಜಾಸ್ತಿ, ಸಂಬಳ ಕಡಿಮೆ. ಅತ್ಯಲ್ಪ ಹಣದಿಂದ ಜೀವನ ನಡೆಸುವುದಾದರೂ ಹೇಗೆ?. ಕೇವಲ ₹2700 ಹಣದಿಂದ ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ ಸಾಧ್ಯವೇ?’ ಎಂದು ಪ್ರಶ್ನಿಸಿದ ಅವರು, ಬಿಸಿಯೂಟ ನೌಕರರ ತಮ್ಮ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಗೋಷ್ಠಿಯಲ್ಲಿ ಪ್ರಮುಖರಾದ ಗಿರೀಶ್, ಸತ್ಯನಾರಾಯಣ, ಕೆಂಚೆಗೌಡ, ಕಾಂತರಾಜು, ಶಶಿಕಾಂತ್, ವನಜಾಕ್ಷಮ್ಮ, ಉಮಾದೇವಿ, ಪದ್ಮಾ, ರತ್ನಮ್ಮ, ಲಕ್ಷ್ಮಿದೇವಮ್ಮ, ಉಮಾದೇವಿ, ನಳಿನಿ, ಮಂಜುಳಾ, ರಾಧಾ, ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ನಿಂದ ಜ.21 ಮತ್ತು 22 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ರಾಜ್ಯ ಕಾನೂನು ಸಲಹೆಗಾರ ಎನ್.ಶಿವಣ್ಣ ತಿಳಿಸಿದರು.</p>.<p>ರಾಜ್ಯದ ವಿವಿಧೆಡೆಯಿಂದ ನೌಕರರು ಜ.21 ರಂದು ಬೆಳಿಗ್ಗೆ 7ಕ್ಕೆ ತುಮಕೂರು ರೈಲು ಇಲ್ದಾಣದಲ್ಲಿ ಸೇರಲಿದ್ದಾರೆ. ಅಲ್ಲಿಂದ ರೈಲಿನಲ್ಲಿ ಬೆಂಗಳೂರು ತೆರಳಲಿದ್ದೇವೆ. ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಬಿಸಿಯೂಟ ನೌಕರರು ಕಳೆದ 17 ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕನಿಷ್ಠ ವೇತನ ಮತ್ತು ಇತರೆ ಸೌಲಭ್ಯಗಳಿಂದ ವಂಚಿತರಾಗಿ ದುಡಿಯುತ್ತಿದ್ದಾರೆ. ಕರ್ನಾಟಕದಲ್ಲಿ ಮುಖ್ಯ ಅಡುಗೆಯವರಿಗೆ ₹2700 ಹಾಗೂ ಅಡುಗೆ ಸಹಾಯಕರಿಗೆ ₹2600 ಮಾತ್ರ ನೀಡಲಾಗುತ್ತಿದೆ. ಈ ಅತ್ಯಲ್ವ ಹಣದಿಂದ ಜೀವನ ನಿರ್ವಹಿಸುವುದು ಹೇಗೆ ಎಂದು ಅವರು ಪ್ರಶ್ನಿಸಿದರು.</p>.<p>ಸರ್ಕಾರವು ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ಹುನ್ನಾರ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ 1 ಲಕ್ಷ 18 ಸಾವಿರ ಮಹಿಳೆಯರು ಕೆಲಸ ಕಳೆದುಕೊಂಡು ಬೀದಿಪಾಲಾಗಲಿದ್ದಾರೆ. ಸರ್ಕಾರಗಳು ಜನರಿಗೆ ಕೆಲಸ ಕೊಡಬೇಕೇ ವಿನಾಃ ಕೆಲಸ ಕಿತ್ತುಕೊಳ್ಳುವುದು ಶೋಭೆಯಲ್ಲ ಎಂದರು.</p>.<p>ಎಐಟಿಯುಸಿ ತುಮಕೂರು ಘಟಕದ ಅಧ್ಯಕ್ಷೆ ರಾಧಮ್ಮ ಮಾತನಾಡಿ, ‘ನಮಗೆ ಕೆಲಸ ಜಾಸ್ತಿ, ಸಂಬಳ ಕಡಿಮೆ. ಅತ್ಯಲ್ಪ ಹಣದಿಂದ ಜೀವನ ನಡೆಸುವುದಾದರೂ ಹೇಗೆ?. ಕೇವಲ ₹2700 ಹಣದಿಂದ ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ ಸಾಧ್ಯವೇ?’ ಎಂದು ಪ್ರಶ್ನಿಸಿದ ಅವರು, ಬಿಸಿಯೂಟ ನೌಕರರ ತಮ್ಮ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಗೋಷ್ಠಿಯಲ್ಲಿ ಪ್ರಮುಖರಾದ ಗಿರೀಶ್, ಸತ್ಯನಾರಾಯಣ, ಕೆಂಚೆಗೌಡ, ಕಾಂತರಾಜು, ಶಶಿಕಾಂತ್, ವನಜಾಕ್ಷಮ್ಮ, ಉಮಾದೇವಿ, ಪದ್ಮಾ, ರತ್ನಮ್ಮ, ಲಕ್ಷ್ಮಿದೇವಮ್ಮ, ಉಮಾದೇವಿ, ನಳಿನಿ, ಮಂಜುಳಾ, ರಾಧಾ, ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>