ತುಮಕೂರು: ಜಿಲ್ಲೆಯಿಂದ 450 ಕಾರ್ಮಿಕರು ಬುಧವಾರ ತಮ್ಮ ರಾಜ್ಯಗಳತ್ತ ಪ್ರಯಾಣ ಬೆಳೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ 18 ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕೋಲಾರ ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚಿಕ್ಕ ಬಾಣಾವರ ರೈಲ್ವೆ ನಿಲ್ದಾಣಕ್ಕೆ ಕಳುಹಿಸಿಕೊಡಲಾಯಿತು.
ಬಿಹಾರದ 300, ಜಾರ್ಖಂಡ್ನ 50, ಉತ್ತರಪ್ರದೇಶದ 100 ಮಂದಿ ಕಾರ್ಮಿಕರು ಇದ್ದರು. ಕಾರ್ಮಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.