<p><strong>ತುರುವೇಕೆರೆ: </strong>ಹಾಲು ಉತ್ಪಾದಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಜಿಲ್ಲಾ ಕೇಂದ್ರದಲ್ಲಿ ಹೆಣ್ಣು ಮಕ್ಕಳ ಉಚಿತ ವಿದ್ಯಾರ್ಥಿ ನಿಲಯ ತೆರೆಯಲಾಗಿದೆ ಎಂದು ತುಮಕೂರು ಹಾಲು ಒಕ್ಕೂಟ (ತುಮುಲ್) ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಅಮ್ಮಸಂದ್ರ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರಾಸುಗಳ ವಿಮೆಗಾಗಿ₹ 6 ಕೋಟಿಯನ್ನು ತುಮುಲ್ ಮೀಸಲಿರಿಸಿದೆ. ಹೈನುಗಾರ ರೈತರ ಹಿತ ಕಾಯಲು ತುಮುಲ್ ಬದ್ಧವಾಗಿದೆ. ಹಾಲು ಉತ್ಪಾದಕರ ಸಂಘಗಳಿಗೆ ಕಟ್ಟಡವನ್ನು ಒದಗಿಸುವಲ್ಲಿ ತುಮುಲ್ ಯಶಸ್ವಿ ಹೆಜ್ಜೆ ಇರಿಸಿದೆ ಎಂದು ಹೇಳಿದರು.</p>.<p>ಉತ್ಪಾದಕರು ಗುಣಮಟ್ಟದ ಹಾಲನ್ನು ಸ್ವೀಕರಣಾ ಕೇಂದ್ರಗಳಿಗೆ ನೀಡುವ ಮೂಲಕ ತುಮುಲ್ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್, ಹೈನುಗಾರಿಕೆ ಗ್ರಾಮೀಣ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಆಗಿದೆ. ತುಮುಲ್ ಹೈನುಗಾರರಿಗಾಗಿ ಹತ್ತು ಹಲವು ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ರೈತರು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಸಂಘದ ಅಧ್ಯಕ್ಷೆ ಎ.ಎಸ್.ಪ್ರೇಮಾ ಬಸವರಾಜು, ಗ್ರಾ.ಪಂ ಅಧ್ಯಕ್ಷೆ ತಾರಾಮಣಿ ಧನಂಜಯ, ಜೆಡಿಎಸ್ ಮುಖಂಡರಾದ ಕೆ.ಸಿದ್ದಗಂಗಯ್ಯ, ಶಿವರಾಜ್, ವಿಸ್ತರಣಾಧಿಕಾರಿಗಳಾದ ಕೆ.ಪಿ.ಮಂಜುನಾಥ್, ಎನ್.ಕಿರಣ್ಕುಮಾರ್, ದಿವಾಕರ್, ಕಾರ್ಯದರ್ಶಿ ಉಮಾ ತೀರ್ಥಯ್ಯ ಹಾಗೂ ಸಂಘದ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ಹಾಲು ಉತ್ಪಾದಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಜಿಲ್ಲಾ ಕೇಂದ್ರದಲ್ಲಿ ಹೆಣ್ಣು ಮಕ್ಕಳ ಉಚಿತ ವಿದ್ಯಾರ್ಥಿ ನಿಲಯ ತೆರೆಯಲಾಗಿದೆ ಎಂದು ತುಮಕೂರು ಹಾಲು ಒಕ್ಕೂಟ (ತುಮುಲ್) ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಅಮ್ಮಸಂದ್ರ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರಾಸುಗಳ ವಿಮೆಗಾಗಿ₹ 6 ಕೋಟಿಯನ್ನು ತುಮುಲ್ ಮೀಸಲಿರಿಸಿದೆ. ಹೈನುಗಾರ ರೈತರ ಹಿತ ಕಾಯಲು ತುಮುಲ್ ಬದ್ಧವಾಗಿದೆ. ಹಾಲು ಉತ್ಪಾದಕರ ಸಂಘಗಳಿಗೆ ಕಟ್ಟಡವನ್ನು ಒದಗಿಸುವಲ್ಲಿ ತುಮುಲ್ ಯಶಸ್ವಿ ಹೆಜ್ಜೆ ಇರಿಸಿದೆ ಎಂದು ಹೇಳಿದರು.</p>.<p>ಉತ್ಪಾದಕರು ಗುಣಮಟ್ಟದ ಹಾಲನ್ನು ಸ್ವೀಕರಣಾ ಕೇಂದ್ರಗಳಿಗೆ ನೀಡುವ ಮೂಲಕ ತುಮುಲ್ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್, ಹೈನುಗಾರಿಕೆ ಗ್ರಾಮೀಣ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಆಗಿದೆ. ತುಮುಲ್ ಹೈನುಗಾರರಿಗಾಗಿ ಹತ್ತು ಹಲವು ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ರೈತರು ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಸಂಘದ ಅಧ್ಯಕ್ಷೆ ಎ.ಎಸ್.ಪ್ರೇಮಾ ಬಸವರಾಜು, ಗ್ರಾ.ಪಂ ಅಧ್ಯಕ್ಷೆ ತಾರಾಮಣಿ ಧನಂಜಯ, ಜೆಡಿಎಸ್ ಮುಖಂಡರಾದ ಕೆ.ಸಿದ್ದಗಂಗಯ್ಯ, ಶಿವರಾಜ್, ವಿಸ್ತರಣಾಧಿಕಾರಿಗಳಾದ ಕೆ.ಪಿ.ಮಂಜುನಾಥ್, ಎನ್.ಕಿರಣ್ಕುಮಾರ್, ದಿವಾಕರ್, ಕಾರ್ಯದರ್ಶಿ ಉಮಾ ತೀರ್ಥಯ್ಯ ಹಾಗೂ ಸಂಘದ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>