<p>ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಪ್ರಸ್ತುತ ಪ್ರತಿ ದಿನ ಹಾಲು ಸಂಗ್ರಹ ಪ್ರಮಾಣ 10.50 ಲಕ್ಷ ಲೀಟರ್ಗೆ ಏರಿಕೆಯಾಗಿದೆ. ಮೇ ತಿಂಗಳ ಅಂತ್ಯದಲ್ಲಿ 9.50 ಲಕ್ಷ ಲೀಟರ್ ಸಂಗ್ರಹವಾಗಿತ್ತು. ದಿನಗಳು ಕಳೆದಂತೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಹೆಚ್ಚಳವಾಗುತ್ತಿದೆ.</p>.<p>ತಾಲ್ಲೂಕಿನ ಮಲ್ಲಸಂದ್ರದ ತುಮುಲ್ ಆಡಳಿತ ಕಚೇರಿ ಬಳಿ ತಿರುಪತಿ ತಿಮ್ಮಪ್ಪ ದೇವಸ್ಥಾನದ ಲಡ್ಡು ತಯಾರಿಕೆಗೆ ತುಪ್ಪ ಸಾಗಿಸುವ ಟ್ಯಾಂಕರ್ ವಾಹನಕ್ಕೆ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಚಾಲನೆ ನೀಡಿದ ನಂತರ ಮಾತನಾಡಿದರು.</p>.<p>ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿದೆ. ಹಾಗಾಗಿ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್ ಆರಂಭಿಸಿದೆ ಎಂದರು.</p>.<p>ಪ್ರತಿದಿನ ಶೇಖರಣೆ ಆಗುತ್ತಿರುವ ಹಾಲಿನಲ್ಲಿ ಬೆಂಗಳೂರಿನಲ್ಲಿ 1.95 ಲಕ್ಷ ಲೀಟರ್, ತುಮಕೂರಿನಲ್ಲಿ 1.20 ಲಕ್ಷ ಲೀಟರ್ ಮಾರಾಟ ಮಾಡಲಾಗುತ್ತಿದೆ. ಮುಂಬೈನಲ್ಲಿ 1 ಲಕ್ಷ ಲೀಟರ್, ಕೇರಳದಲ್ಲಿ 50 ಸಾವಿರ ಲೀಟರ್ ಮಾರಾಟವಾಗುತ್ತಿದೆ. 80 ಸಾವಿರ ಲೀಟರ್ ಹಾಲನ್ನು ಪೌಡರ್ ಮಾಡಿ ಶಾಲಾ ಮಕ್ಕಳ ಕ್ಷೀರಭಾಗ್ಯ ಯೋಜನೆಗೆ ಕೊಡಲಾಗುತ್ತಿದೆ. 1 ಲಕ್ಷ ಲೀಟರ್ ಮೊಸರು, 4 ಟ್ಯಾಂಕರ್ ಲೋಡ್ ತುಪ್ಪ ಮಾರಾಟವಾಗುತ್ತಿದೆ. ತುಮುಲ್ ಸಂಗ್ರಹಿಸುವ ಎಲ್ಲ ಹಾಲನ್ನೂ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ತುಮುಲ್ ನಿರ್ದೇಶಕರಾದ ಡಿ.ಕೃಷ್ಣಕುಮಾರ್, ಮಹಾಲಿಂಗಪ್ಪ, ಎಂ.ಕೆ.ಪ್ರಕಾಶ್, ಭಾರತಿ ಶ್ರೀನಿವಾಸ್, ಪ್ರಕಾಶ್, ನಂಜೇಗೌಡ, ನಾಗೇಶ್ಬಾಬು, ಸಿದ್ದಲಿಂಗಯ್ಯ, ಚಂದ್ರಶೇಖರರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಪ್ರಸ್ತುತ ಪ್ರತಿ ದಿನ ಹಾಲು ಸಂಗ್ರಹ ಪ್ರಮಾಣ 10.50 ಲಕ್ಷ ಲೀಟರ್ಗೆ ಏರಿಕೆಯಾಗಿದೆ. ಮೇ ತಿಂಗಳ ಅಂತ್ಯದಲ್ಲಿ 9.50 ಲಕ್ಷ ಲೀಟರ್ ಸಂಗ್ರಹವಾಗಿತ್ತು. ದಿನಗಳು ಕಳೆದಂತೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಹೆಚ್ಚಳವಾಗುತ್ತಿದೆ.</p>.<p>ತಾಲ್ಲೂಕಿನ ಮಲ್ಲಸಂದ್ರದ ತುಮುಲ್ ಆಡಳಿತ ಕಚೇರಿ ಬಳಿ ತಿರುಪತಿ ತಿಮ್ಮಪ್ಪ ದೇವಸ್ಥಾನದ ಲಡ್ಡು ತಯಾರಿಕೆಗೆ ತುಪ್ಪ ಸಾಗಿಸುವ ಟ್ಯಾಂಕರ್ ವಾಹನಕ್ಕೆ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಚಾಲನೆ ನೀಡಿದ ನಂತರ ಮಾತನಾಡಿದರು.</p>.<p>ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿದೆ. ಹಾಗಾಗಿ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್ ಆರಂಭಿಸಿದೆ ಎಂದರು.</p>.<p>ಪ್ರತಿದಿನ ಶೇಖರಣೆ ಆಗುತ್ತಿರುವ ಹಾಲಿನಲ್ಲಿ ಬೆಂಗಳೂರಿನಲ್ಲಿ 1.95 ಲಕ್ಷ ಲೀಟರ್, ತುಮಕೂರಿನಲ್ಲಿ 1.20 ಲಕ್ಷ ಲೀಟರ್ ಮಾರಾಟ ಮಾಡಲಾಗುತ್ತಿದೆ. ಮುಂಬೈನಲ್ಲಿ 1 ಲಕ್ಷ ಲೀಟರ್, ಕೇರಳದಲ್ಲಿ 50 ಸಾವಿರ ಲೀಟರ್ ಮಾರಾಟವಾಗುತ್ತಿದೆ. 80 ಸಾವಿರ ಲೀಟರ್ ಹಾಲನ್ನು ಪೌಡರ್ ಮಾಡಿ ಶಾಲಾ ಮಕ್ಕಳ ಕ್ಷೀರಭಾಗ್ಯ ಯೋಜನೆಗೆ ಕೊಡಲಾಗುತ್ತಿದೆ. 1 ಲಕ್ಷ ಲೀಟರ್ ಮೊಸರು, 4 ಟ್ಯಾಂಕರ್ ಲೋಡ್ ತುಪ್ಪ ಮಾರಾಟವಾಗುತ್ತಿದೆ. ತುಮುಲ್ ಸಂಗ್ರಹಿಸುವ ಎಲ್ಲ ಹಾಲನ್ನೂ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ತುಮುಲ್ ನಿರ್ದೇಶಕರಾದ ಡಿ.ಕೃಷ್ಣಕುಮಾರ್, ಮಹಾಲಿಂಗಪ್ಪ, ಎಂ.ಕೆ.ಪ್ರಕಾಶ್, ಭಾರತಿ ಶ್ರೀನಿವಾಸ್, ಪ್ರಕಾಶ್, ನಂಜೇಗೌಡ, ನಾಗೇಶ್ಬಾಬು, ಸಿದ್ದಲಿಂಗಯ್ಯ, ಚಂದ್ರಶೇಖರರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>