<p><strong>ಪಾವಗಡ:</strong> ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಹಸುಗಳಿಗೆ ಚರ್ಮಗಂಟು ರೋಗಬಾಧೆ ವ್ಯಾಪಕವಾದ ಕಾರಣ ಹಾಲಿನ ಉತ್ಪಾದನೆ ಗಣನೀಯವಾಗಿ ಕುಸಿಯುತ್ತಿದೆ.</p>.<p>ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರಗಳಿಂದ ವೈರಾಣು ಸೋಂಕು ಅಕ್ಕಪಕ್ಕದ ಜಾನುವಾರುಗಳಿಗೂ ತ್ವರಿತಗತಿಯಲ್ಲಿ ಹಬ್ಬುತ್ತಿದ್ದು, ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಬೆಳವಣಿಗೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಚಿಂತೆಗೀಡುಮಾಡಿದೆ.</p>.<p>ಆಂಧ್ರ ಗಡಿಯಲ್ಲಿರುವ ಪಳವಳ್ಳಿ, ವೆಂಕಟಮ್ಮನಹಳ್ಳಿ, ತಿರುಮಣಿ, ನಾಗಲಮಡಿಕೆ, ಬೊಮ್ಮತನಹಳ್ಳಿ, ಕೊಡಮಡುಗು ಸೇರಿದಂತೆ ಹಲವು ಗ್ರಾಮಗಳಲ್ಲಿಶುಷ್ಕ ವಾತಾವರಣದಿಂದ ಸೋಂಕು ವೇಗವಾಗಿ ಹರಡುತ್ತಿದೆ.</p>.<p>ರೈತರು ರೋಗ ಕಾಣಿಸಿಕೊಂಡ ಆರಂಭದಲ್ಲಿಯೇ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಇಡೀ ಮೈ ಗಾಯಗಳಾಗಿ ಜಾನುವಾರುಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಾಲು ಉತ್ಪಾದನೆಯ ಮೇಲೆಯೂ ಪರಿಣಾಮ ಬೀರುತ್ತದೆ’ ಎನ್ನುತ್ತಾರೆ ಪಶು ಇಲಾಖೆ ವೈದ್ಯರು.</p>.<p>‘ವೈರಸ್ನಿಂದ ಹಬ್ಬುವ ರೋಗದಿಂದ ಪ್ರಾಣಹಾನಿ ಸಂಭವಿಸುವುದಿಲ್ಲ. ಸಕಾಲಕ್ಕೆ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ಸುಲಭವಾಗಿ ಹತೋಟಿಗೆ ತರಬಹುದು’ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಸಿದ್ದಗಂಗಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಹಸುಗಳಿಗೆ ಚರ್ಮಗಂಟು ರೋಗಬಾಧೆ ವ್ಯಾಪಕವಾದ ಕಾರಣ ಹಾಲಿನ ಉತ್ಪಾದನೆ ಗಣನೀಯವಾಗಿ ಕುಸಿಯುತ್ತಿದೆ.</p>.<p>ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರಗಳಿಂದ ವೈರಾಣು ಸೋಂಕು ಅಕ್ಕಪಕ್ಕದ ಜಾನುವಾರುಗಳಿಗೂ ತ್ವರಿತಗತಿಯಲ್ಲಿ ಹಬ್ಬುತ್ತಿದ್ದು, ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಬೆಳವಣಿಗೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಚಿಂತೆಗೀಡುಮಾಡಿದೆ.</p>.<p>ಆಂಧ್ರ ಗಡಿಯಲ್ಲಿರುವ ಪಳವಳ್ಳಿ, ವೆಂಕಟಮ್ಮನಹಳ್ಳಿ, ತಿರುಮಣಿ, ನಾಗಲಮಡಿಕೆ, ಬೊಮ್ಮತನಹಳ್ಳಿ, ಕೊಡಮಡುಗು ಸೇರಿದಂತೆ ಹಲವು ಗ್ರಾಮಗಳಲ್ಲಿಶುಷ್ಕ ವಾತಾವರಣದಿಂದ ಸೋಂಕು ವೇಗವಾಗಿ ಹರಡುತ್ತಿದೆ.</p>.<p>ರೈತರು ರೋಗ ಕಾಣಿಸಿಕೊಂಡ ಆರಂಭದಲ್ಲಿಯೇ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಇಡೀ ಮೈ ಗಾಯಗಳಾಗಿ ಜಾನುವಾರುಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಾಲು ಉತ್ಪಾದನೆಯ ಮೇಲೆಯೂ ಪರಿಣಾಮ ಬೀರುತ್ತದೆ’ ಎನ್ನುತ್ತಾರೆ ಪಶು ಇಲಾಖೆ ವೈದ್ಯರು.</p>.<p>‘ವೈರಸ್ನಿಂದ ಹಬ್ಬುವ ರೋಗದಿಂದ ಪ್ರಾಣಹಾನಿ ಸಂಭವಿಸುವುದಿಲ್ಲ. ಸಕಾಲಕ್ಕೆ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ಸುಲಭವಾಗಿ ಹತೋಟಿಗೆ ತರಬಹುದು’ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಸಿದ್ದಗಂಗಯ್ಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>