<p><strong>ತುಮಕೂರು</strong>: ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳು ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಗಣಿ ಪರಿಸರ ಪುನಶ್ಚೇತನಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಹಲವು ತಿಂಗಳಿಂದ ಕೆಲವು ಕಾಮಗಾರಿಗಳು ಟೆಂಡರ್ ಹಂತದಲ್ಲೇ ಉಳಿದಿವೆ. ಮತ್ತೆ ಕೆಲವು ಕಾಮಗಾರಿಗಳು ಟೆಂಡರ್ ಕರೆಯಲು ಬಾಕಿಯಿದ್ದು, ಹಲವು ಕಾಮಗಾರಿಗಳಿಗೆ ಇನ್ನೂ ಟೆಂಡರ್ ಕರೆದಿಲ್ಲ. ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಕೆಲಸ ಪೂರ್ಣಗೊಂಡಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು <br />ಸೂಚಿಸಿದರು.</p>.<p>ವಿದ್ಯಾರ್ಥಿನಿಲಯಗಳ ನಿರ್ಮಾಣ, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಸಾರ್ವಜನಿಕರ ಜೀವನ ಮಟ್ಟ ಸುಧಾರಿಸಲು ರೂಪಿಸಿರುವ ಯೋಜನೆಗಳ ಅನುಷ್ಠಾನ ತ್ವರಿತಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಅರಣ್ಯ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಕುಡಿಯುವ ನೀರು, ಗ್ರಾಮೀಣ ರಸ್ತೆ, ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಗಣಿ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲೋಕೇಶ್ ಕುಮಾರ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳು ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಗಣಿ ಪರಿಸರ ಪುನಶ್ಚೇತನಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಆಕ್ಷೇಪ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಬುಧವಾರ ಗಣಿ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಹಲವು ತಿಂಗಳಿಂದ ಕೆಲವು ಕಾಮಗಾರಿಗಳು ಟೆಂಡರ್ ಹಂತದಲ್ಲೇ ಉಳಿದಿವೆ. ಮತ್ತೆ ಕೆಲವು ಕಾಮಗಾರಿಗಳು ಟೆಂಡರ್ ಕರೆಯಲು ಬಾಕಿಯಿದ್ದು, ಹಲವು ಕಾಮಗಾರಿಗಳಿಗೆ ಇನ್ನೂ ಟೆಂಡರ್ ಕರೆದಿಲ್ಲ. ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಕೆಲಸ ಪೂರ್ಣಗೊಂಡಿಲ್ಲ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು <br />ಸೂಚಿಸಿದರು.</p>.<p>ವಿದ್ಯಾರ್ಥಿನಿಲಯಗಳ ನಿರ್ಮಾಣ, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಸಾರ್ವಜನಿಕರ ಜೀವನ ಮಟ್ಟ ಸುಧಾರಿಸಲು ರೂಪಿಸಿರುವ ಯೋಜನೆಗಳ ಅನುಷ್ಠಾನ ತ್ವರಿತಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಅರಣ್ಯ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಕುಡಿಯುವ ನೀರು, ಗ್ರಾಮೀಣ ರಸ್ತೆ, ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಗಣಿ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲೋಕೇಶ್ ಕುಮಾರ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>