<p><strong>ತುಮಕೂರು: </strong>ಜಿಲ್ಲೆಯ 7 ಖರೀದಿ ಕೇಂದ್ರಗಳಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರಾಗಿ ಖರೀದಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ 2019-20ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಳೆದ ಸಾಲಿನಲ್ಲಿರುವ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ, ಹುಳಿಯಾರ್ ಖರೀದಿ ಕೇಂದ್ರಗಳಲ್ಲಿ ಈ ಬಾರಿಯೂ ಖರೀದಿ ಪ್ರಕ್ರಿಯೆ ಮುಂದುವರೆಸುವುದು ಸೂಕ್ತ ಎಂದು ತಿಳಿಸಿದರು.</p>.<p>2019-20ನೇ ಸಾಲಿನ ಎಂಎಸ್ಪಿ ಯೋಜನೆಯಡಿ ರಾಗಿ ಖರೀದಿ ಬೆಲೆಯು ಕ್ವಿಂಟಲ್ಗೆ ₹3,150 ಇದೆ. ಜನವರಿ ಎರಡನೇ ವಾರದಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಖರೀದಿ ಕೇಂದ್ರಗಳಲ್ಲಿ ಗುಣಮಟ್ಟದ ರಾಗಿ ಖರೀದಿ ಮಾಡಬೇಕು. ಖರೀದಿಯಲ್ಲಿ ಲೋಪವಾದರೆ ಸಂಬಂಧಪಟ್ಟವರೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.</p>.<p>ಕೇಂದ್ರಗಳಲ್ಲಿರುವ ಸಿಬ್ಬಂದಿ ಹಾಗೂ ಗ್ರೇಡರ್ಗಳಿಗೆ ಪ್ರಕ್ರಿಯೆ ಕುರಿತಂತೆ ಸೂಕ್ತ ಸಲಹೆ ಸೂಚನೆ ಹಾಗೂ ತರಬೇತಿ ನೀಡಿ ಪಾರದರ್ಶಕವಾಗಿ ಕೆಲಸ ನಡೆಯುವಂತೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಖರೀದಿ ಕೇಂದ್ರಗಳಲ್ಲಿ ಎಂಎಸ್ಪಿ ಹಾಗೂ ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ರೈತರಿಗೆ ಯಾವುದೇ ಗೊಂದಲ ಉಂಟಾಗಬಾರದು. ಈ ಬಗ್ಗೆ ಕರಪತ್ರ ಹಂಚುವುದು, ಎಪಿಎಂಸಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ಗಳ ಅಳವಡಿಕೆ ಹಾಗೂ ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲೆಯಲ್ಲಿ ಕಳೆದ ಸಾಲಿನ ರಾಗಿ ಇಳುವರಿ ಹಾಗೂ ಈ ಸಾಲಿನಲ್ಲಿ ಬರಬಹುದಾದ ಇಳುವರಿಯ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದ ಸಾಲಿಗಿಂತ ಈ ಬಾರಿ ರಾಗಿ ಇಳುವರಿ ಶೇ 40-50ರಷ್ಟು ಅಧಿಕವಾಗಿರುವುದರಿಂದ ಖರೀದಿ ಕೇಂದ್ರಗಳಿಗೆ ಹೆಚ್ಚಿನ ರಾಗಿ ಬರುವ ನಿರೀಕ್ಷೆ ಇದೆ ಅವರು ತಿಳಿಸಿದರು.</p>.<p>ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಜಂಟಿ ನಿರ್ದೇಶಕ ಎಂ.ಸಿ.ಶ್ರೀನಿವಾಸಯ್ಯ, ಕಾನೂನು ಮಾಪನ ಇಲಾಖೆ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಇಲಾಖೆಯ ಉಪ ನಿರ್ದೇಶಕರು, ರಾಜ್ಯ ಉಗ್ರಾಣ ನಿಗಮ ತುಮಕೂರು ಘಟಕ-1 ಮತ್ತು 2, ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲೆಯ 7 ಖರೀದಿ ಕೇಂದ್ರಗಳಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರಾಗಿ ಖರೀದಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ 2019-20ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಳೆದ ಸಾಲಿನಲ್ಲಿರುವ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ, ಹುಳಿಯಾರ್ ಖರೀದಿ ಕೇಂದ್ರಗಳಲ್ಲಿ ಈ ಬಾರಿಯೂ ಖರೀದಿ ಪ್ರಕ್ರಿಯೆ ಮುಂದುವರೆಸುವುದು ಸೂಕ್ತ ಎಂದು ತಿಳಿಸಿದರು.</p>.<p>2019-20ನೇ ಸಾಲಿನ ಎಂಎಸ್ಪಿ ಯೋಜನೆಯಡಿ ರಾಗಿ ಖರೀದಿ ಬೆಲೆಯು ಕ್ವಿಂಟಲ್ಗೆ ₹3,150 ಇದೆ. ಜನವರಿ ಎರಡನೇ ವಾರದಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಖರೀದಿ ಕೇಂದ್ರಗಳಲ್ಲಿ ಗುಣಮಟ್ಟದ ರಾಗಿ ಖರೀದಿ ಮಾಡಬೇಕು. ಖರೀದಿಯಲ್ಲಿ ಲೋಪವಾದರೆ ಸಂಬಂಧಪಟ್ಟವರೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.</p>.<p>ಕೇಂದ್ರಗಳಲ್ಲಿರುವ ಸಿಬ್ಬಂದಿ ಹಾಗೂ ಗ್ರೇಡರ್ಗಳಿಗೆ ಪ್ರಕ್ರಿಯೆ ಕುರಿತಂತೆ ಸೂಕ್ತ ಸಲಹೆ ಸೂಚನೆ ಹಾಗೂ ತರಬೇತಿ ನೀಡಿ ಪಾರದರ್ಶಕವಾಗಿ ಕೆಲಸ ನಡೆಯುವಂತೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಖರೀದಿ ಕೇಂದ್ರಗಳಲ್ಲಿ ಎಂಎಸ್ಪಿ ಹಾಗೂ ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ರೈತರಿಗೆ ಯಾವುದೇ ಗೊಂದಲ ಉಂಟಾಗಬಾರದು. ಈ ಬಗ್ಗೆ ಕರಪತ್ರ ಹಂಚುವುದು, ಎಪಿಎಂಸಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ಗಳ ಅಳವಡಿಕೆ ಹಾಗೂ ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲೆಯಲ್ಲಿ ಕಳೆದ ಸಾಲಿನ ರಾಗಿ ಇಳುವರಿ ಹಾಗೂ ಈ ಸಾಲಿನಲ್ಲಿ ಬರಬಹುದಾದ ಇಳುವರಿಯ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದ ಸಾಲಿಗಿಂತ ಈ ಬಾರಿ ರಾಗಿ ಇಳುವರಿ ಶೇ 40-50ರಷ್ಟು ಅಧಿಕವಾಗಿರುವುದರಿಂದ ಖರೀದಿ ಕೇಂದ್ರಗಳಿಗೆ ಹೆಚ್ಚಿನ ರಾಗಿ ಬರುವ ನಿರೀಕ್ಷೆ ಇದೆ ಅವರು ತಿಳಿಸಿದರು.</p>.<p>ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಜಂಟಿ ನಿರ್ದೇಶಕ ಎಂ.ಸಿ.ಶ್ರೀನಿವಾಸಯ್ಯ, ಕಾನೂನು ಮಾಪನ ಇಲಾಖೆ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಇಲಾಖೆಯ ಉಪ ನಿರ್ದೇಶಕರು, ರಾಜ್ಯ ಉಗ್ರಾಣ ನಿಗಮ ತುಮಕೂರು ಘಟಕ-1 ಮತ್ತು 2, ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>