ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ನಾಲೆಯಲ್ಲಿ ಕಾಮಗಾರಿ ನಡೆಯುತ್ತಿತ್ತು.ಹಾಗಾಗಿ ನೀರು ಬಿಡಲು ಆಗಲಿಲ್ಲ. ಈಗಾಗಲೇ ನೀರು ಬಿಡುವ ಕುರಿತು ಸಭೆ ಮಾಡಲಾಗಿದೆ. ಜಿಲ್ಲೆಗೆ ಅಗತ್ಯ ನೀರನ್ನು ಬಿಡಲಾಗುತ್ತದೆ. ಬುಗುಡನಹಳ್ಳಿ ಸೇರಿದಂತೆ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು. ಜಿಲ್ಲೆಗೆ ನೀರಿನ ವಿಷಯವಾಗಿ ಯಾವುದೇ ತೊಂದರೆಯಾಗದಂತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನೋಡಿಕೊಳ್ಳುತ್ತಿದೆ ಎಂದರು.