ಈ ಹಿಂದೆ ಕುಮಾರಸ್ವಾಮಿ ನೇತೃ ತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಹಕಾರ ಸಚಿವರಾಗಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಜಿ.ಟಿ.ದೇವೇಗೌಡರು ಕಾರ್ಯನಿರ್ವಹಿಸಿದ್ದಾರೆ. ನಾಲ್ಕನೇ ಬಾರಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎದುರೇ ಗೆಲುವು ಸಾಧಿ ಸಿದ್ದಾರೆ. ಹೀಗಾಗಿ, ಅವರಿಗೆ ಪ್ರಮುಖ ಖಾತೆಯೇ ಸಿಗುವ ಸಂಭವವಿದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೂ ಅವರ ಹೆಸರು ಕೇಳಿ ಬರುತ್ತಿದೆ.