<p><strong>ಚಿಕ್ಕನಾಯಕನಹಳ್ಳಿ:</strong> ಗುಣಮಟ್ಟದ ಆಹಾರ, ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿದರು.</p>.<p>ಅಡುಗೆ ಕೋಣೆ, ಗ್ರಂಥಾಲಯ ಸೇರಿದಂತೆ ವಿದ್ಯಾರ್ಥಿನಿಲಯವನ್ನು ವೀಕ್ಷಿಸಿದ ಶಾಸಕರು ಸರ್ಕಾರ ಬಡವರಿಗಾಗಿ ವಸತಿ ಶಾಲೆಗಳನ್ನು ತೆರೆದಿದೆ. ಇಂತಹ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಊಟ ಹಾಗೂ ವಸತಿಯನ್ನು ಹೊಂದಿದ್ದು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಪುರಂದರ ಮಾತನಾಡಿ, ಹಾಸ್ಟೆಲ್ನಲ್ಲಿ ಸ್ವಚ್ಛತೆಗೆ ಅದ್ಯತೆ ನೀಡಿ ಮಕ್ಕಳ ಆರೋಗ್ಯದ ಕಡೆ ಗಮನ ನೀಡಬೇಕು. ಇರುವ ವ್ಯವಸ್ಥೆಯನ್ನು ಬಳಸಿಕೊಂಡು ಹೊಂದಿಕೊಂಡು ಹೋಗಬೇಕು. ವಸತಿ ನಿಲಯವನ್ನು ಮನೆ ಎಂದು ಭಾವಿಸಿ ಸ್ವಚ್ಛವಾಗಿರಿಸಿಕೊಳ್ಳಿ ಎಂದು ಸಲಹೆ ನೀಡಿದರು</p>.<p>ವಿದ್ಯಾರ್ಥಿಗಳು ಉಚಿತ ಸಿಇಟಿ ತರಬೇತಿ ನೀಡುವಂತೆ ಪದವಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಗುಣಮಟ್ಟದ ಆಹಾರ, ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿದರು.</p>.<p>ಅಡುಗೆ ಕೋಣೆ, ಗ್ರಂಥಾಲಯ ಸೇರಿದಂತೆ ವಿದ್ಯಾರ್ಥಿನಿಲಯವನ್ನು ವೀಕ್ಷಿಸಿದ ಶಾಸಕರು ಸರ್ಕಾರ ಬಡವರಿಗಾಗಿ ವಸತಿ ಶಾಲೆಗಳನ್ನು ತೆರೆದಿದೆ. ಇಂತಹ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಊಟ ಹಾಗೂ ವಸತಿಯನ್ನು ಹೊಂದಿದ್ದು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ತಹಶೀಲ್ದಾರ್ ಪುರಂದರ ಮಾತನಾಡಿ, ಹಾಸ್ಟೆಲ್ನಲ್ಲಿ ಸ್ವಚ್ಛತೆಗೆ ಅದ್ಯತೆ ನೀಡಿ ಮಕ್ಕಳ ಆರೋಗ್ಯದ ಕಡೆ ಗಮನ ನೀಡಬೇಕು. ಇರುವ ವ್ಯವಸ್ಥೆಯನ್ನು ಬಳಸಿಕೊಂಡು ಹೊಂದಿಕೊಂಡು ಹೋಗಬೇಕು. ವಸತಿ ನಿಲಯವನ್ನು ಮನೆ ಎಂದು ಭಾವಿಸಿ ಸ್ವಚ್ಛವಾಗಿರಿಸಿಕೊಳ್ಳಿ ಎಂದು ಸಲಹೆ ನೀಡಿದರು</p>.<p>ವಿದ್ಯಾರ್ಥಿಗಳು ಉಚಿತ ಸಿಇಟಿ ತರಬೇತಿ ನೀಡುವಂತೆ ಪದವಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>