<p><strong>ತುರುವೇಕೆರೆ</strong>: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ 29 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿಯಿಂದ ಬಹುಪಾಲು ನೀರಿನ ಸಮಸ್ಯೆ ಬಗೆಹರಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್ವೆಲ್ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್ಲೈನ್ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆವರೆಗೆ ಪೈಪ್ಲೈನ್ ಕಾಮಗಾರಿ ಮುಗಿದಿದೆ. ₹48 ಕೋಟಿ ಯೋಜನೆಗೆ ಸರ್ಕಾರ ಕೇವಲ ₹9 ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು.</p>.<p>ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ ₹50 ಕೋಟಿ ನೀಡಲಾಗಿದೆ. ಆದರೆ ತುರುವೇಕೆರೆಗೆ ಕೇವಲ ₹30 ಕೋಟಿ ನೀಡಲಾಗಿದೆ. ಇದು ತಾರತಮ್ಯ. ಈ ಬಗ್ಗೆ ಉಪ ಮುಖ್ಯಮಂತ್ರಿಯನ್ನು ಕೇಳಿದರೆ, ಲಿಂಕ್ ಕೆನಾಲ್ಗೆ ತಡೆ ಒಡ್ಡದಿದ್ದರೆ ₹50 ಕೋಟಿ ಕೊಡುತ್ತೇನೆ ಎಂದು ಆಮಿಷ ಒಡ್ಡುತ್ತಾರೆ. ಇದು ಸರಿಯಲ್ಲ. ನಮಗೆ ಜಿಲ್ಲೆಯ ರೈತ ಹಿತ ಮುಖ್ಯವೇ ಹೊರೆತು ಅವರು ನೀಡುವ ಆಮಿಷವಲ್ಲ. ಅವರ ದುಡ್ಡೇ ಬೇಡ. ಗಣಿಭಾದಿತ ಪ್ರದೇಶವೆಂದು ಗಣಿ ಮಾಲೀಕರು ₹300 ಕೋಟಿ ನೀಡಿದ್ದಾರೆ. ಅದರಲ್ಲಿ ವಿತರಣೆ ಮಾಡಲು ಅವರಿಗೇನು ಕಷ್ಟ? ಎಂದು ಕಿಡಿಕಾರಿದರು.</p>.<p>ತಾಲ್ಲೂಕಿನ ಮಾಯಸಂದ್ರದಿಂದ ಕೆ.ಬಿ.ಕ್ರಾಸ್ವರೆಗಿನ 150–ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಬೇಕು. ಕೂಡಲೇ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ವೀಸ್ ರಸ್ತೆ ಮಾಡುವ ಮೂಲಕ ಜನರಿಗೆ ಸರಾಗವಾಗಿ ಓಡಾಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ವಿಜಯೇಂದ್ರ, ಮಂಗೀಕುಪ್ಪೆ ಬಸವರಾಜು, ಅರಿಶಿನದ ಹಳ್ಳಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ 29 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಬ್ಬೇಘಟ್ಟ ಹೋಬಳಿಯ ಜನರಿಗೆ ಈ ಕಾಮಗಾರಿಯಿಂದ ಬಹುಪಾಲು ನೀರಿನ ಸಮಸ್ಯೆ ಬಗೆಹರಿದಂತಾಗುತ್ತದೆ. ಈಗಾಗಲೇ ಮಲ್ಲಾಘಟ್ಟ ಕೆರೆಯಿಂದ ಕಾಮಗಾರಿ ಆರಂಭವಾಗಿದೆ. ಮಲ್ಲಾಘಟ್ಟದ ಬಳಿ ಜಾಕ್ವೆಲ್ ನಿರ್ಮಿಸಲಾಗಿದೆ. ಅಲ್ಲಿಂದ ನೀರು ಹರಿಸುವ ಸಲುವಾಗಿ ಪೈಪ್ಲೈನ್ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಈಗಾಗಲೇ ವೈಟಿ ರಸ್ತೆವರೆಗೆ ಪೈಪ್ಲೈನ್ ಕಾಮಗಾರಿ ಮುಗಿದಿದೆ. ₹48 ಕೋಟಿ ಯೋಜನೆಗೆ ಸರ್ಕಾರ ಕೇವಲ ₹9 ಕೋಟಿಯಷ್ಟು ಹಣ ಮಾತ್ರ ಬಿಡುಗಡೆಗೊಳಿಸಿದೆ. ಉಳಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು.</p>.<p>ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆ ಚಾಲನೆಯಲ್ಲಿದೆ. ತಿಪಟೂರು, ಗುಬ್ಬಿ ತಾಲ್ಲೂಕಿನಲ್ಲಿ ಕಾಮಗಾರಿ ಮಾಡಲು ತಲಾ ₹50 ಕೋಟಿ ನೀಡಲಾಗಿದೆ. ಆದರೆ ತುರುವೇಕೆರೆಗೆ ಕೇವಲ ₹30 ಕೋಟಿ ನೀಡಲಾಗಿದೆ. ಇದು ತಾರತಮ್ಯ. ಈ ಬಗ್ಗೆ ಉಪ ಮುಖ್ಯಮಂತ್ರಿಯನ್ನು ಕೇಳಿದರೆ, ಲಿಂಕ್ ಕೆನಾಲ್ಗೆ ತಡೆ ಒಡ್ಡದಿದ್ದರೆ ₹50 ಕೋಟಿ ಕೊಡುತ್ತೇನೆ ಎಂದು ಆಮಿಷ ಒಡ್ಡುತ್ತಾರೆ. ಇದು ಸರಿಯಲ್ಲ. ನಮಗೆ ಜಿಲ್ಲೆಯ ರೈತ ಹಿತ ಮುಖ್ಯವೇ ಹೊರೆತು ಅವರು ನೀಡುವ ಆಮಿಷವಲ್ಲ. ಅವರ ದುಡ್ಡೇ ಬೇಡ. ಗಣಿಭಾದಿತ ಪ್ರದೇಶವೆಂದು ಗಣಿ ಮಾಲೀಕರು ₹300 ಕೋಟಿ ನೀಡಿದ್ದಾರೆ. ಅದರಲ್ಲಿ ವಿತರಣೆ ಮಾಡಲು ಅವರಿಗೇನು ಕಷ್ಟ? ಎಂದು ಕಿಡಿಕಾರಿದರು.</p>.<p>ತಾಲ್ಲೂಕಿನ ಮಾಯಸಂದ್ರದಿಂದ ಕೆ.ಬಿ.ಕ್ರಾಸ್ವರೆಗಿನ 150–ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗಬೇಕು. ಕೂಡಲೇ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ವೀಸ್ ರಸ್ತೆ ಮಾಡುವ ಮೂಲಕ ಜನರಿಗೆ ಸರಾಗವಾಗಿ ಓಡಾಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಜೆಡಿಎಸ್ ವಕ್ತಾರ ವೆಂಕಟಾಪುರ ಯೋಗೀಶ್, ವಿಜಯೇಂದ್ರ, ಮಂಗೀಕುಪ್ಪೆ ಬಸವರಾಜು, ಅರಿಶಿನದ ಹಳ್ಳಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>