ನಾಲಾ ಆಧುನೀಕರಣ ಕಾಮಗಾರಿಯು ಭಾಗಶಃ ಪೂರ್ಣಗೊಂಡಿದೆ. ಇಂತಹ ಸಮಯದಲ್ಲಿ ದುರುದ್ದೇಶದಿಂದ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಕೈಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಈ ಕಾಮಗಾರಿ ಪೂರ್ಣಗೊಳ್ಳಲು ಬಿಡುವುದಿಲ್ಲ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಪಕ್ಷಾತೀತ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗುವುದು ನಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.