<p>ಕುಣಿಗಲ್: ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಸೌಲಭ್ಯಗಳ ಅರಿವು ಮೂಡಿಸಿ, ಸಕಾಲದಲ್ಲಿ ದಾಖಲೆಗಳನ್ನು ಪಡೆದು, ಸೌಲಭ್ಯಗಳನ್ನು ವಿತರಿಸುವಂತೆ ಶಾಸಕ ಡಾ.ರಂಗನಾಥ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ನಡೆಮಾವಿನಪುರ ಗೊಲ್ಲರಹಟ್ಟಿಯಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಮತ್ತು ಶಾಸಕರ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 20 ಗೊಲ್ಲರಹಟ್ಟಿಗಳಿದ್ದು, ವಿದ್ಯಾವಂತರಲ್ಲದಿದ್ದರೂ ಪ್ರಜ್ಞಾವಂತರಿದ್ದಾರೆ. ಕಂದಾಚಾರಗಳಿಂದ ಹೊರಬರಲು ಜನಜಾಗೃತಿ ಕಾರ್ಯಕ್ರಮಗಳನ್ನು ಮತ್ತು ಮಹಿಳೆಯರಿಗಾಗಿ ವೈದ್ಯಕೀಯ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದರು.</p>.<p>ಗೊಲ್ಲರಹಟ್ಟಿಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಗೆ ವ್ಯವಸ್ಥೆ ಮಾಡಲು ಸಮಾಜ ಕಲ್ಯಾಣ ಮತ್ತು ಬಿಸಿಎಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಡಿತರ ವಿತರಣೆಯಲ್ಲಿ ಲೋಪಗಳಿದ್ದು, ಸಕಾಲದಲ್ಲಿ ಹಂಚಿಕೆ ಮಾಡದ, ಕಡಿಮೆ ತೂಕದ ವಿತರಣೆ ಮತ್ತು ಹಣ ಪಡೆಯುತ್ತಿರುವ ಬಗ್ಗೆ ಗ್ರಾಮಸ್ಥರಿಂದ ದೂರು ಬಂದ ಕಾರಣ ವ್ಯವಸ್ಥೆ ಸರಿಪಡಿಸುವಂತೆ ಆಹಾರ ಶಿರಸ್ತೇದಾರ್ ಮಲ್ಲಿಕಾರ್ಜುನ ಅವರಿಗೆ ಸೂಚಿಸದರು.</p>.<p>ಅವ್ಯವಹಾರ ತಡೆಗಟ್ಟಲು ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದರು.</p>.<p>ಪೌತಿ ಖಾತೆ ಮಾಡಲು ತಹಶೀಲ್ದಾರ್ ಸಿದ್ಧವಿದ್ದರೂ, ಕೆಳ ಹಂತದ ಸಿಬ್ಬಂದಿಯ ಧನದಾಹದಿಂದಾಗಿ ಪೌತಿ ಖಾತೆಗಳಿಗೆ ವಿಳಂಬವಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಾರಂಭದಲ್ಲಿಯೇ ಎಚ್ಚರಿಕೆವಹಿಸಿ ಮಾತ್ರೆ ತೆಗೆದುಕೊಳ್ಳದಿದ್ದರೆ ಜೀವನವಿಡೀ ಅನಾರೋಗ್ಯದಿಂದ ಬಳಲಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಗ್ರಾಮಸ್ಥರು ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸುವಂತೆ, ಸ್ಮಶಾನ, ಪಶು ಆಸ್ಪತ್ರೆ, ಶುದ್ಧ ಕುಡಿಯುವ ನೀರಿಗಾಗಿ ಮನವಿ ಮಾಡಿದರು.</p>.<p>ತಹಶೀಲ್ದಾರ್ ಮಹಬಲೇಶ್ವರ್ ಮಾತನಾಡಿ, ಗ್ರಾಮ ವಾಸ್ತವ್ಯದಿಂದಾಗಿ ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗಿದೆ. ನಡೆಮಾವಿನಪುರ ಗೊಲ್ಲರಹಟ್ಟಿಯಲ್ಲಿ 20 ಪಿಂಚಣಿಗಳಿಗೆ ಶನಿವಾರ ಮಂಜೂರಾತಿ ನೀಡಲಾಗಿದೆ. ಪೌತಿ ಖಾತೆಗಾಗಿ 41 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶುಕ್ರವಾರ ರಾತ್ರಿ ಪ್ರಾರಂಭವಾಗಿದ್ದು, ಶಾಸಕ ಡಾ.ರಂಗನಾಥ್ ಮತ್ತು ತಹಶೀಲ್ದಾರ್ ಮಹಬಲೇಶ್ವರ್ ಅವರನ್ನು ಕಾಡುಗೊಲ್ಲರ ಸಂಪ್ರದಾಯದಂತೆ ಕರಿಕಂಬಳಿ ಹೊದ್ದಿಸಿ ಹಟ್ಟಿಯ ನಿವಾಸಿಗಳು ಸ್ವಾಗತಿಸಿದರು. ಕಾಡುಗೊಲ್ಲರ ಸಂಸ್ಕೃತಿ ಬಿಂಬಿಸುವ ಕಲೆಗಳನ್ನು ಪ್ರದರ್ಶಿಸಿ, ಕಾಡುಗೊಲ್ಲರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ, ಪಿಡಿಒ ಹರೀಂದ್ರ ಗೋಪಾಲ್, ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿಯ ಜಿ.ಕೆ.ನಾಗಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರಿ ಸೌಲಭ್ಯಗಳ ಅರಿವು ಮೂಡಿಸಿ, ಸಕಾಲದಲ್ಲಿ ದಾಖಲೆಗಳನ್ನು ಪಡೆದು, ಸೌಲಭ್ಯಗಳನ್ನು ವಿತರಿಸುವಂತೆ ಶಾಸಕ ಡಾ.ರಂಗನಾಥ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ನಡೆಮಾವಿನಪುರ ಗೊಲ್ಲರಹಟ್ಟಿಯಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಮತ್ತು ಶಾಸಕರ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 20 ಗೊಲ್ಲರಹಟ್ಟಿಗಳಿದ್ದು, ವಿದ್ಯಾವಂತರಲ್ಲದಿದ್ದರೂ ಪ್ರಜ್ಞಾವಂತರಿದ್ದಾರೆ. ಕಂದಾಚಾರಗಳಿಂದ ಹೊರಬರಲು ಜನಜಾಗೃತಿ ಕಾರ್ಯಕ್ರಮಗಳನ್ನು ಮತ್ತು ಮಹಿಳೆಯರಿಗಾಗಿ ವೈದ್ಯಕೀಯ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದರು.</p>.<p>ಗೊಲ್ಲರಹಟ್ಟಿಗಳಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಗೆ ವ್ಯವಸ್ಥೆ ಮಾಡಲು ಸಮಾಜ ಕಲ್ಯಾಣ ಮತ್ತು ಬಿಸಿಎಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪಡಿತರ ವಿತರಣೆಯಲ್ಲಿ ಲೋಪಗಳಿದ್ದು, ಸಕಾಲದಲ್ಲಿ ಹಂಚಿಕೆ ಮಾಡದ, ಕಡಿಮೆ ತೂಕದ ವಿತರಣೆ ಮತ್ತು ಹಣ ಪಡೆಯುತ್ತಿರುವ ಬಗ್ಗೆ ಗ್ರಾಮಸ್ಥರಿಂದ ದೂರು ಬಂದ ಕಾರಣ ವ್ಯವಸ್ಥೆ ಸರಿಪಡಿಸುವಂತೆ ಆಹಾರ ಶಿರಸ್ತೇದಾರ್ ಮಲ್ಲಿಕಾರ್ಜುನ ಅವರಿಗೆ ಸೂಚಿಸದರು.</p>.<p>ಅವ್ಯವಹಾರ ತಡೆಗಟ್ಟಲು ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದರು.</p>.<p>ಪೌತಿ ಖಾತೆ ಮಾಡಲು ತಹಶೀಲ್ದಾರ್ ಸಿದ್ಧವಿದ್ದರೂ, ಕೆಳ ಹಂತದ ಸಿಬ್ಬಂದಿಯ ಧನದಾಹದಿಂದಾಗಿ ಪೌತಿ ಖಾತೆಗಳಿಗೆ ವಿಳಂಬವಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಾರಂಭದಲ್ಲಿಯೇ ಎಚ್ಚರಿಕೆವಹಿಸಿ ಮಾತ್ರೆ ತೆಗೆದುಕೊಳ್ಳದಿದ್ದರೆ ಜೀವನವಿಡೀ ಅನಾರೋಗ್ಯದಿಂದ ಬಳಲಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಗ್ರಾಮಸ್ಥರು ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸುವಂತೆ, ಸ್ಮಶಾನ, ಪಶು ಆಸ್ಪತ್ರೆ, ಶುದ್ಧ ಕುಡಿಯುವ ನೀರಿಗಾಗಿ ಮನವಿ ಮಾಡಿದರು.</p>.<p>ತಹಶೀಲ್ದಾರ್ ಮಹಬಲೇಶ್ವರ್ ಮಾತನಾಡಿ, ಗ್ರಾಮ ವಾಸ್ತವ್ಯದಿಂದಾಗಿ ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗಿದೆ. ನಡೆಮಾವಿನಪುರ ಗೊಲ್ಲರಹಟ್ಟಿಯಲ್ಲಿ 20 ಪಿಂಚಣಿಗಳಿಗೆ ಶನಿವಾರ ಮಂಜೂರಾತಿ ನೀಡಲಾಗಿದೆ. ಪೌತಿ ಖಾತೆಗಾಗಿ 41 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶುಕ್ರವಾರ ರಾತ್ರಿ ಪ್ರಾರಂಭವಾಗಿದ್ದು, ಶಾಸಕ ಡಾ.ರಂಗನಾಥ್ ಮತ್ತು ತಹಶೀಲ್ದಾರ್ ಮಹಬಲೇಶ್ವರ್ ಅವರನ್ನು ಕಾಡುಗೊಲ್ಲರ ಸಂಪ್ರದಾಯದಂತೆ ಕರಿಕಂಬಳಿ ಹೊದ್ದಿಸಿ ಹಟ್ಟಿಯ ನಿವಾಸಿಗಳು ಸ್ವಾಗತಿಸಿದರು. ಕಾಡುಗೊಲ್ಲರ ಸಂಸ್ಕೃತಿ ಬಿಂಬಿಸುವ ಕಲೆಗಳನ್ನು ಪ್ರದರ್ಶಿಸಿ, ಕಾಡುಗೊಲ್ಲರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ, ಪಿಡಿಒ ಹರೀಂದ್ರ ಗೋಪಾಲ್, ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿಯ ಜಿ.ಕೆ.ನಾಗಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>