ಹೈನುಗಾರಿಕೆ ನಂಬಿರುವ ತಾಲ್ಲೂಕಿನ ರೈತರ ಅನುಕೂಲಕ್ಕಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಸಾಲಿನಲ್ಲಿ 218 ರಾಸುಗಳು ಮೃತಪಟ್ಟಿದ್ದು ₹87 ಲಕ್ಷ ಪರಿಹಾರ ಧನ, 52 ಮಂದಿ ಮೃತಪಟ್ಟಿದ್ದು ₹26 ಲಕ್ಷ ಪರಿಹಾರಧನ, 90 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಇಬ್ಬರು ಪಶುವೈದ್ಯರನ್ನು ಮತ್ತು ಸಂಚಾರಿ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಿದ್ದು, ಪಶುವೈದ್ಯಕೀಯ ಸೇವೆಗಳನ್ನು ನೀಡಲಾಗುತ್ತಿದೆ. ಸಂಘಗಳ ಚುನಾವಣೆಯಲ್ಲಿ ರಾಜಕಾರಣಕ್ಕೆ ಮಹತ್ವ ನೀಡದೆ ಅವಿರೋಧ ಆಯ್ಕೆಗೆ ಶ್ರಮಿಸಿ, ಚುನಾವಣಾ ವೆಚ್ಚವನ್ನು ಸಂಘಗಳ ಕಟ್ಟಡ ನಿರ್ಮಾಣಕ್ಕೆ ಸೇರಿದಂತೆ ಉತ್ಪಾದಕರ ಅನುಕೂಲಕ್ಕೆ ಬಳಸಬೇಕು ಎಂದು ಮನವಿ ಮಾಡಿದರು.