‘ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಚಿಕಿತ್ಸೆ ನೀಡಬೇಕು. ಅವರ ಮೇಲೆ ಸಿಡಿಮಿಡಿಗೊಳ್ಳದೆ ಪ್ರಾಮಾಣಿಕವಾಗಿ ಅವರಿಗೆ ಸೇವೆ ಸಲ್ಲಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಸಹಿಸುವುದಿಲ್ಲ. ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡ, ಯಂತ್ರೋಪಕರಣಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಭಾಗದಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ವೈದ್ಯಾಧಿಕಾರಿ ಡಾ.ಕಿರಣ್ ಅವರಿಗೆ ಸೂಚಿಸಿದರು.