<p><strong>ತುಮಕೂರು</strong>: ‘ಗ್ರಾಮಾಂತರ ಭಾಗದಲ್ಲಿ ಈವರೆಗೆ ಒಂದೇ ಒಂದು ನಿವೇಶನ ಹಂಚಿಕೆಯಾಗಿಲ್ಲ. ಅಧಿಕಾರಿಗಳು ಕಚೇರಿಗೆ ಸೀಮಿತವಾಗಿ ಕಾಲ ಹರಣ ಮಾಡಬೇಡಿ’ ಎಂದು ಶಾಸಕ ಬಿ.ಸುರೇಶ್ಗೌಡ ತಾ.ಪಂ ಇಒ ಹರ್ಷಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗ್ರಾಮಾಂತರ ಕ್ಷೇತ್ರದ ಸುತ್ತಲೂ ಅರಣ್ಯ ಪ್ರದೇಶವಿದೆ. ಕಾಡು ಪ್ರಾಣಿಗಳು ಆಹಾರ ಅರಸಿ ಜನ ವಸತಿ ಪ್ರದೇಶಕ್ಕೆ ಬರುತ್ತಿವೆ. ಪ್ರಾಣಿ-ಪಕ್ಷಿಗಳು, ವಿಶೇಷವಾಗಿ ಕರಡಿಗಳಿಗೆ ಆಹಾರ ಸಿಗುವಂತಹ ಹಣ್ಣಿನ ಗಿಡ ನೆಡಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ನಿರ್ದೇಶಿಸಿದರು.</p>.<p>ವಿವಿಧೆಡೆ ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಕೂಡಲೇ ಉದ್ಘಾಟಿಸಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಸರ್ಕಾರದಿಂದ ಬರುವ ಅನುದಾನ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು. ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಹೆಬ್ಬೂರು, ಸಿರಿವರ, ಹೆಗ್ಗೆರೆ ಭಾಗದಲ್ಲಿ ನಿವೇಶನ ಗುರುತಿಸಿ ಹಕ್ಕಿ–ಪಿಕ್ಕಿ ಜನಾಂಗದವರಿಗೆ ಹಂಚಿಕೆ ಮಾಡಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಗುತ್ತಿಗೆ ಪಡೆದು ಕೆಲಸ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಅಶೋಕ್ ಅವರಿಗೆ ತಿಳಿಸಿದರು.</p>.<p>ಪದೇ ಪದೇ ಸಭೆಗೆ ಗೈರಾಗುತ್ತಿರುವ ತಹಶೀಲ್ದಾರ್ ಸಿದ್ದೇಶ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಯರಾಂ ಸೇರಿ ಇತರೆ ಅಧಿಕಾರಿಗಳಿಗೆ ನೋಟಿಸ್ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆಡಳಿತಾಧಿಕಾರಿ ಬಿ.ಸಿ.ಶಾರದಮ್ಮ ಅವರಿಗೆ ನಿರ್ದೇಶಿಸಿದರು.</p>.<p>ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ರುದ್ರೇಶ್, ಜಯಕೃಷ್ಣ, ರುದ್ರಪ್ಪ, ಪ್ರಶಾಂತ್ ಕುಮಾರ್, ತನ್ವೀರ್ಖಾನ್, ಕಲ್ಪನಾ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಗ್ರಾಮಾಂತರ ಭಾಗದಲ್ಲಿ ಈವರೆಗೆ ಒಂದೇ ಒಂದು ನಿವೇಶನ ಹಂಚಿಕೆಯಾಗಿಲ್ಲ. ಅಧಿಕಾರಿಗಳು ಕಚೇರಿಗೆ ಸೀಮಿತವಾಗಿ ಕಾಲ ಹರಣ ಮಾಡಬೇಡಿ’ ಎಂದು ಶಾಸಕ ಬಿ.ಸುರೇಶ್ಗೌಡ ತಾ.ಪಂ ಇಒ ಹರ್ಷಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗ್ರಾಮಾಂತರ ಕ್ಷೇತ್ರದ ಸುತ್ತಲೂ ಅರಣ್ಯ ಪ್ರದೇಶವಿದೆ. ಕಾಡು ಪ್ರಾಣಿಗಳು ಆಹಾರ ಅರಸಿ ಜನ ವಸತಿ ಪ್ರದೇಶಕ್ಕೆ ಬರುತ್ತಿವೆ. ಪ್ರಾಣಿ-ಪಕ್ಷಿಗಳು, ವಿಶೇಷವಾಗಿ ಕರಡಿಗಳಿಗೆ ಆಹಾರ ಸಿಗುವಂತಹ ಹಣ್ಣಿನ ಗಿಡ ನೆಡಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ನಿರ್ದೇಶಿಸಿದರು.</p>.<p>ವಿವಿಧೆಡೆ ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಕೂಡಲೇ ಉದ್ಘಾಟಿಸಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಸರ್ಕಾರದಿಂದ ಬರುವ ಅನುದಾನ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು. ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಹೆಬ್ಬೂರು, ಸಿರಿವರ, ಹೆಗ್ಗೆರೆ ಭಾಗದಲ್ಲಿ ನಿವೇಶನ ಗುರುತಿಸಿ ಹಕ್ಕಿ–ಪಿಕ್ಕಿ ಜನಾಂಗದವರಿಗೆ ಹಂಚಿಕೆ ಮಾಡಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಗುತ್ತಿಗೆ ಪಡೆದು ಕೆಲಸ ನಿರ್ವಹಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಅಶೋಕ್ ಅವರಿಗೆ ತಿಳಿಸಿದರು.</p>.<p>ಪದೇ ಪದೇ ಸಭೆಗೆ ಗೈರಾಗುತ್ತಿರುವ ತಹಶೀಲ್ದಾರ್ ಸಿದ್ದೇಶ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಯರಾಂ ಸೇರಿ ಇತರೆ ಅಧಿಕಾರಿಗಳಿಗೆ ನೋಟಿಸ್ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆಡಳಿತಾಧಿಕಾರಿ ಬಿ.ಸಿ.ಶಾರದಮ್ಮ ಅವರಿಗೆ ನಿರ್ದೇಶಿಸಿದರು.</p>.<p>ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ರುದ್ರೇಶ್, ಜಯಕೃಷ್ಣ, ರುದ್ರಪ್ಪ, ಪ್ರಶಾಂತ್ ಕುಮಾರ್, ತನ್ವೀರ್ಖಾನ್, ಕಲ್ಪನಾ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>