ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನರ ಸೇವೆ ಮಾಡಲು ಶಾಸಕರಾಗಿದ್ದೇವೆ ಎನ್ನುವುದನ್ನು ಮರೆತು 15 ಶಾಸಕರು ಹಣಕ್ಕೆ ಮಾರಾಟವಾಗಿದ್ದಾರೆ. ಜನರು ಸೈಕಲ್ನಲ್ಲಿ ಓಡಾಡಲು ಕಷ್ಟ ಪಡುತ್ತಿರುವ ಸಮಯದಲ್ಲಿ ಮಾರಾಟವಾದ ಶಾಸಕರನ್ನುವಿಶೇಷ ಖಾಸಗಿ ವಿಮಾನಗಳಲ್ಲಿ ಮುಂಬೈಗೆ ಕಳುಹಿಸುತ್ತಿದ್ದಾರೆ. ಇಂದು ಶಾಸಕರು ಭಯದ ವಾತಾವರಣದಲ್ಲಿದ್ದಾರೆ. ಮುಂಬೈನಲ್ಲಿ ಶಾಸಕರು ಒಂದು ರೀತಿಯಲ್ಲಿ ಕೂಡಿ ಹಾಕಿ ಬಂಧನದಲ್ಲಿರಿಸಿದ್ದಾರೆ. ರಾಜ್ಯದಿಂದ ಹೋಗಿದ್ದ ಪೊಲೀಸ್ ಉನ್ನತ ಅಧಿಕಾರಿ ಸಹ ಶಾಸಕರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನು ಜೀವಂತವಾಗಿದೆ ಎನ್ನುವ ಅನುಮಾನ ಮೂಡುತ್ತಿದೆ ಎಂದರು.