ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ತುಮಕೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಗೆಲುವು

Last Updated 14 ಡಿಸೆಂಬರ್ 2021, 10:00 IST
ಅಕ್ಷರ ಗಾತ್ರ

ತುಮಕೂರು: ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಇನ್ನೂ ಅಧಿಕೃತವಾಗಿ ಪ್ರಕಟವಾಗಬೇಕಿದೆ.

ಮತಗಳ ಎಣಿಕೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಗಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಗೆಲುವಿಗೆ 2261 ಮತಗಳು ಬೇಕಿದ್ದು, ರಾಜೇಂದ್ರ 2554 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಮತಪತ್ರಗಳಲ್ಲಿ ರಾಜೇಂದ್ರ ಅವರಿಗೆ ಬಂದಿರುವ ಎರಡನೇ ಪ್ರಾಶಸ್ತ್ಯದ ಮತಗಳನ್ನು ಪರಿಗಣಿಸಿದ ನಂತರ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

ವಿಜಯೋತ್ಸವ: ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತವಾಗುತ್ತಿದ್ದಂತೆ ಮತ ಎಣಿಕೆ ನಡೆಯುತ್ತಿರುವ ಡಿಪ್ಲೊಮಾ ಕಾಲೇಜಿನ ಎದುರು ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT