ಕಳೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಲೇಪಾಕ್ಷ್ ಅವರಿಗೆ ಬಿಜೆಪಿಯು ಟಿಕೆಟ್ ನೀಡಿತ್ತು. ಟಿಕೆಟ್ ಘೋಷಣೆಗೂ ಮುನ್ನವೇ ಅವರು ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರಚಾರ ಕೈಗೊಂಡಿದ್ದರು. ಇನ್ನೇನು ನಾಮಪತ್ರ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಲೇಪಾಕ್ಷ್ ಅವರನ್ನು ಬದಲಿಸಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಸೋತ ವೈ.ಎ.ನಾರಾಯಣಸ್ವಾಮಿ ಅವರನ್ನು ಕಣಕ್ಕಿಳಿಸಲಾಯಿತು. ನಾರಾಯಣಸ್ವಾಮಿ ಗೆಲುವು ಕಂಡರು.