<p><strong>ತುಮಕೂರು</strong>: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡಮಾಡುವ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಎಸ್ಐಟಿ ನಿರ್ದೇಶಕರಾಗಿದ್ದ ಎಂ.ಎನ್.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಶಿಕ್ಷಣ, ಆಡಳಿತ, ಮಠಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಚನ್ನಬಸಪ್ಪ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ₹1 ಲಕ್ಷ ನಗದು, ಅಭಿನಂದನಾ ಪತ್ರವನ್ನು ಒಳಗೊಂಡಿದೆ.</p>.<p>‘ಸಿದ್ಧಗಂಗಾ ಶಿವಕುಮಾರಶ್ರೀ’ ಪ್ರಶಸ್ತಿಗೆ ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಎಸ್.ಪಿ.ಉಮಾದೇವಿ ಹಾಗೂ ತುಮಕೂರಿನ ತಜ್ಞವೈದ್ಯ ಡಾ.ಸಿ.ಶರತ್ ಕುಮಾರ್ ಆಯ್ಕೆ ಆಗಿದ್ದಾರೆ. ತಲಾ ₹25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.</p>.<p>‘ಸಂಘಸಿರಿ’ ಪ್ರಶಸ್ತಿಗೆ ದುಗ್ಗಹಟ್ಟಿಯ ಪಿ.ವೀರಭದ್ರಪ್ಪ, ತುಮಕೂರಿನ ಎಚ್.ಬಿ.ನಂಜುಂಡಯ್ಯ, ಎಂ.ಎನ್.ದಶರಥರಾಮಯ್ಯ, ಗೆದ್ದಲಗಟ್ಟೆಯ ಎಂ.ಸಿದ್ಧಯ್ಯ, ಬೆಂಗಳೂರಿನ ಜಿ.ನಾಗಸುಂದರ್, ದಾವಣಗೆರೆ ಸಿ.ಕೆ.ಸಿದ್ಧಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ತಿಳಿಸಿದ್ದಾರೆ.</p>.<p>ಸಿದ್ಧಗಂಗಾ ಮಠದಲ್ಲಿ ಡಿ. 21ರಂದು ನಡೆಯುವ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ 69ನೇ ಸರ್ವಸದಸ್ಯರ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡಮಾಡುವ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಎಸ್ಐಟಿ ನಿರ್ದೇಶಕರಾಗಿದ್ದ ಎಂ.ಎನ್.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಶಿಕ್ಷಣ, ಆಡಳಿತ, ಮಠಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಚನ್ನಬಸಪ್ಪ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ₹1 ಲಕ್ಷ ನಗದು, ಅಭಿನಂದನಾ ಪತ್ರವನ್ನು ಒಳಗೊಂಡಿದೆ.</p>.<p>‘ಸಿದ್ಧಗಂಗಾ ಶಿವಕುಮಾರಶ್ರೀ’ ಪ್ರಶಸ್ತಿಗೆ ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಎಸ್.ಪಿ.ಉಮಾದೇವಿ ಹಾಗೂ ತುಮಕೂರಿನ ತಜ್ಞವೈದ್ಯ ಡಾ.ಸಿ.ಶರತ್ ಕುಮಾರ್ ಆಯ್ಕೆ ಆಗಿದ್ದಾರೆ. ತಲಾ ₹25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.</p>.<p>‘ಸಂಘಸಿರಿ’ ಪ್ರಶಸ್ತಿಗೆ ದುಗ್ಗಹಟ್ಟಿಯ ಪಿ.ವೀರಭದ್ರಪ್ಪ, ತುಮಕೂರಿನ ಎಚ್.ಬಿ.ನಂಜುಂಡಯ್ಯ, ಎಂ.ಎನ್.ದಶರಥರಾಮಯ್ಯ, ಗೆದ್ದಲಗಟ್ಟೆಯ ಎಂ.ಸಿದ್ಧಯ್ಯ, ಬೆಂಗಳೂರಿನ ಜಿ.ನಾಗಸುಂದರ್, ದಾವಣಗೆರೆ ಸಿ.ಕೆ.ಸಿದ್ಧಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ತಿಳಿಸಿದ್ದಾರೆ.</p>.<p>ಸಿದ್ಧಗಂಗಾ ಮಠದಲ್ಲಿ ಡಿ. 21ರಂದು ನಡೆಯುವ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ 69ನೇ ಸರ್ವಸದಸ್ಯರ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>