ಕಲ್ಪತರು ನಾಡಿನಲ್ಲಿ ಕೊಬ್ಬರಿ, ತೆಂಗು ಬೆಳೆಗಾರರ ಹಿತದೃಷ್ಟಿಯಿಂದ ಕೊಬ್ಬರಿಗೆ ಕನಿಷ್ಠ ₹ 20 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ಅಡಿಕೆ ಮತ್ತು ರೇಷ್ಮೆ ಹೊರದೇಶಗಳಿಂದ ಅಕ್ರಮವಾಗಿ ನುಸುಳಿ ಬರುತ್ತಿದೆ. ದೇಶದ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಕಠಿಣ ಕ್ರಮ ಜರುಗಿಸಬೇಕು ಮತ್ತು ಸಂಬಂಧಿಸಿದ ನೀತಿ ರೂಪಿಸಬೇಕು ಎಂದು ಮನವಿ ಮಾಡಿದರು.