<p><strong>ತುಮಕೂರು: </strong>ನಗರದ ಶಿವಶ್ರೀ ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ ಸಿದ್ಧಾರ್ಧ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ₹ 4.7 ಕೋಟಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.</p>.<p>ಅಖಿಲ ಭಾರತ ಕೋಟಾದಡಿ ಹಂಚಿಕೆ ಆಗಬೇಕಿದ್ದ ವೈದ್ಯಕೀಯ ಸೀಟುಗಳನ್ನು ಅಕ್ರಮವಾಗಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಆ ಹಣವನ್ನು ಬೇನಾಮಿಯಾಗಿ ಠೇವಣಿ ಇಟ್ಟರೇ ಎನ್ನುವ ಪ್ರಶ್ನೆ ಮೂಡಿದೆ. ಸಹಕಾರ ಸಂಸ್ಥೆ ತುಮಕೂರಿನಲ್ಲಿ ಮೂರು ಮತ್ತು ಬೆಂಗಳೂರಿನಲ್ಲಿ ಒಂದು ಶಾಖೆ ಹೊಂದಿದೆ.</p>.<p>ಈ ಠೇವಣಿ ಹಣದ ಬಡ್ಡಿಯನ್ನು ಆನಂದ್ ಪಡೆಯುತ್ತಿದ್ದರು ಎನ್ನಲಾಗುತ್ತಿದೆ. ನಗರದ ಯಾವ ಯಾವ ಬ್ಯಾಂಕುಗಳಲ್ಲಿ ಮತ್ತು ಸಹಕಾರಿ ಸಂಸ್ಥೆಗಳಲ್ಲಿ ಶಾಸಕ ಜಿ.ಪರಮೇಶ್ವರ ಮತ್ತು ಅವರ ಅಣ್ಣನ ಮಗ ಆನಂದ್ ವ್ಯವಹಾರ ನಡೆಸಿದ್ದಾರೆ ಎನ್ನುವ ಬಗ್ಗೆಯೂ ಐ.ಟಿ ಮಾಹಿತಿ ಕಲೆ ಹಾಕಿದೆ.</p>.<p>ಆನಂದ್, ಶಿವಶ್ರೀ ಸಹಕಾರ ಸಂಸ್ಥೆಯಲ್ಲಿ ₹ 6.7 ಕೋಟಿ ಸಾಲ ಸಹ ಪಡೆದಿದ್ದಾರೆ. ಸಾಲಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿನ ಮನೆ ಮತ್ತು ಎಂ.ಜಿ.ರಸ್ತೆಯಲ್ಲಿನ ವಾಣಿಜ್ಯ ಸಂಕೀರ್ಣವನ್ನು ಆಧಾರವಾಗಿಟ್ಟಿದ್ದಾರೆ. ವಾಣಿಜ್ಯ ಸಂಕೀರ್ಣದ ಬಾಡಿಗೆ ನೇರವಾಗಿ ಸಾಲಕ್ಕೆ ಜಮೆ ಆಗುವಂತೆ ಮಾಡಿದ್ದಾರೆ ಎನ್ನುತ್ತವೆ ಮೂಲಗಳು.</p>.<p>‘ಸಿದ್ಧಾರ್ಧ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯಕೀಯ ಸೀಟು ಮಾರಾಟ ನಡೆಯುತ್ತಿದೆ ಎಂದು ಒಂದು ವರ್ಷದ ಹಿಂದೆಯೇ ದೂರು ಬಂದಿತ್ತು. ಆಗ ಪರಮೇಶ್ವರ ಸಚಿವರಾಗಿದ್ದರು’ ಎನ್ನುತ್ತವೆ ಪೊಲೀಸ್ ಉನ್ನತ ಮೂಲಗಳು.</p>.<p>‘ವೈದ್ಯಕೀಯ ಶಿಕ್ಷಣ ಸಂಸ್ಥೆಯ ವ್ಯವಹಾರಗಳನ್ನು ನಾನೇ ನೋಡಿಕೊಳ್ಳುತ್ತಿದ್ದೆ. ಇದರಲ್ಲಿ ಚಿಕ್ಕಪ್ಪನ ಪಾತ್ರ ಇಲ್ಲ’ ಎಂದು ಆನಂದ್ ಐ.ಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಇಷ್ಟೆಲ್ಲಾ ವಿಚಾರಣೆಗಳು ನಡೆಯುತ್ತಿದ್ದರೆ ಆನಂದ್ ಮಾತ್ರ ವಿದೇಶದಲ್ಲಿ ಇದ್ದಾರೆ!</p>.<p>‘ಅವರು ಶೀಘ್ರದಲ್ಲಿಯೇ ವಾಪಸ್ ಆಗಲಿದ್ದು ವಿಚಾರಣೆ ಎದುರಿಸಲಿದ್ದಾರೆ’ ಎನ್ನುತ್ತವೆ ಆನಂದ್ ಆಪ್ತ ಮೂಲಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಶಿವಶ್ರೀ ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ ಸಿದ್ಧಾರ್ಧ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ₹ 4.7 ಕೋಟಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.</p>.<p>ಅಖಿಲ ಭಾರತ ಕೋಟಾದಡಿ ಹಂಚಿಕೆ ಆಗಬೇಕಿದ್ದ ವೈದ್ಯಕೀಯ ಸೀಟುಗಳನ್ನು ಅಕ್ರಮವಾಗಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಆ ಹಣವನ್ನು ಬೇನಾಮಿಯಾಗಿ ಠೇವಣಿ ಇಟ್ಟರೇ ಎನ್ನುವ ಪ್ರಶ್ನೆ ಮೂಡಿದೆ. ಸಹಕಾರ ಸಂಸ್ಥೆ ತುಮಕೂರಿನಲ್ಲಿ ಮೂರು ಮತ್ತು ಬೆಂಗಳೂರಿನಲ್ಲಿ ಒಂದು ಶಾಖೆ ಹೊಂದಿದೆ.</p>.<p>ಈ ಠೇವಣಿ ಹಣದ ಬಡ್ಡಿಯನ್ನು ಆನಂದ್ ಪಡೆಯುತ್ತಿದ್ದರು ಎನ್ನಲಾಗುತ್ತಿದೆ. ನಗರದ ಯಾವ ಯಾವ ಬ್ಯಾಂಕುಗಳಲ್ಲಿ ಮತ್ತು ಸಹಕಾರಿ ಸಂಸ್ಥೆಗಳಲ್ಲಿ ಶಾಸಕ ಜಿ.ಪರಮೇಶ್ವರ ಮತ್ತು ಅವರ ಅಣ್ಣನ ಮಗ ಆನಂದ್ ವ್ಯವಹಾರ ನಡೆಸಿದ್ದಾರೆ ಎನ್ನುವ ಬಗ್ಗೆಯೂ ಐ.ಟಿ ಮಾಹಿತಿ ಕಲೆ ಹಾಕಿದೆ.</p>.<p>ಆನಂದ್, ಶಿವಶ್ರೀ ಸಹಕಾರ ಸಂಸ್ಥೆಯಲ್ಲಿ ₹ 6.7 ಕೋಟಿ ಸಾಲ ಸಹ ಪಡೆದಿದ್ದಾರೆ. ಸಾಲಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿನ ಮನೆ ಮತ್ತು ಎಂ.ಜಿ.ರಸ್ತೆಯಲ್ಲಿನ ವಾಣಿಜ್ಯ ಸಂಕೀರ್ಣವನ್ನು ಆಧಾರವಾಗಿಟ್ಟಿದ್ದಾರೆ. ವಾಣಿಜ್ಯ ಸಂಕೀರ್ಣದ ಬಾಡಿಗೆ ನೇರವಾಗಿ ಸಾಲಕ್ಕೆ ಜಮೆ ಆಗುವಂತೆ ಮಾಡಿದ್ದಾರೆ ಎನ್ನುತ್ತವೆ ಮೂಲಗಳು.</p>.<p>‘ಸಿದ್ಧಾರ್ಧ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ವೈದ್ಯಕೀಯ ಸೀಟು ಮಾರಾಟ ನಡೆಯುತ್ತಿದೆ ಎಂದು ಒಂದು ವರ್ಷದ ಹಿಂದೆಯೇ ದೂರು ಬಂದಿತ್ತು. ಆಗ ಪರಮೇಶ್ವರ ಸಚಿವರಾಗಿದ್ದರು’ ಎನ್ನುತ್ತವೆ ಪೊಲೀಸ್ ಉನ್ನತ ಮೂಲಗಳು.</p>.<p>‘ವೈದ್ಯಕೀಯ ಶಿಕ್ಷಣ ಸಂಸ್ಥೆಯ ವ್ಯವಹಾರಗಳನ್ನು ನಾನೇ ನೋಡಿಕೊಳ್ಳುತ್ತಿದ್ದೆ. ಇದರಲ್ಲಿ ಚಿಕ್ಕಪ್ಪನ ಪಾತ್ರ ಇಲ್ಲ’ ಎಂದು ಆನಂದ್ ಐ.ಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಇಷ್ಟೆಲ್ಲಾ ವಿಚಾರಣೆಗಳು ನಡೆಯುತ್ತಿದ್ದರೆ ಆನಂದ್ ಮಾತ್ರ ವಿದೇಶದಲ್ಲಿ ಇದ್ದಾರೆ!</p>.<p>‘ಅವರು ಶೀಘ್ರದಲ್ಲಿಯೇ ವಾಪಸ್ ಆಗಲಿದ್ದು ವಿಚಾರಣೆ ಎದುರಿಸಲಿದ್ದಾರೆ’ ಎನ್ನುತ್ತವೆ ಆನಂದ್ ಆಪ್ತ ಮೂಲಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>