<p><strong>ತುಮಕೂರು</strong>: ತಾಲ್ಲೂಕಿನ ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ 11 ಮಂಗಗಳ ಕಳೇಬರ ಪತ್ತೆಯಾಗಿದೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.</p>.<p>ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿದರು. 400 ಮೀಟರ್ನಿಂದ 500 ಮೀಟರ್ ಅಂತರದಲ್ಲಿ 9 ಮಂಗ, 2 ಲಂಗೂರಗಳು ಮೃತಪಟ್ಟಿವೆ. ದೇವರಾಯನದುರ್ಗ–ದುರ್ಗದಹಳ್ಳಿ ಅರಣ್ಯ ಭಾಗದಲ್ಲಿ ಜ. 2ರಂದು 7, ಜ. 3ರಂದು 4 ಮಂಗಗಳ ಕಳೇಬರ ಸಿಕ್ಕಿದೆ.</p>.<p>ಊರ್ಡಿಗೆರೆ ಪಶು ಆಸ್ಪತ್ರೆ ವೈದ್ಯರು ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿದರು. ದೇಹ ಮತ್ತು ಹೊಟ್ಟೆಯ ಕರುಳಿನ ಭಾಗದಲ್ಲಿ ಅನ್ನದ ಪದಾರ್ಥ ಇರುವುದು ಕಂಡು ಬಂದಿದೆ. ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಂಗಗಳ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿನ ಪಶು ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿದೆ.</p>.<p>‘ಯಾವುದೇ ಮಂಗಗಳು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದು ಕಂಡು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ವರದಿ ಬಂದ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ. ಈ ಕುರಿತು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಪ್ರತಿಕ್ರಿಯಿಸಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾನುವಾರ ಸಹ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು. ಯಾವುದೇ ಕಳೇಬರ ಪತ್ತೆಯಾಗಿಲ್ಲ.</p>.<p>ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮಂಗಗಳ ಕಳೇಬರ ಪತ್ತೆಯಾದ ಬಗ್ಗೆ ಅಗತ್ಯ ಮಾಹಿತಿ ಪಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ 11 ಮಂಗಗಳ ಕಳೇಬರ ಪತ್ತೆಯಾಗಿದೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.</p>.<p>ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿದರು. 400 ಮೀಟರ್ನಿಂದ 500 ಮೀಟರ್ ಅಂತರದಲ್ಲಿ 9 ಮಂಗ, 2 ಲಂಗೂರಗಳು ಮೃತಪಟ್ಟಿವೆ. ದೇವರಾಯನದುರ್ಗ–ದುರ್ಗದಹಳ್ಳಿ ಅರಣ್ಯ ಭಾಗದಲ್ಲಿ ಜ. 2ರಂದು 7, ಜ. 3ರಂದು 4 ಮಂಗಗಳ ಕಳೇಬರ ಸಿಕ್ಕಿದೆ.</p>.<p>ಊರ್ಡಿಗೆರೆ ಪಶು ಆಸ್ಪತ್ರೆ ವೈದ್ಯರು ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿದರು. ದೇಹ ಮತ್ತು ಹೊಟ್ಟೆಯ ಕರುಳಿನ ಭಾಗದಲ್ಲಿ ಅನ್ನದ ಪದಾರ್ಥ ಇರುವುದು ಕಂಡು ಬಂದಿದೆ. ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಂಗಗಳ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿನ ಪಶು ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿದೆ.</p>.<p>‘ಯಾವುದೇ ಮಂಗಗಳು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದು ಕಂಡು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ವರದಿ ಬಂದ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ. ಈ ಕುರಿತು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಪ್ರತಿಕ್ರಿಯಿಸಿದರು.</p>.<p>ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾನುವಾರ ಸಹ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು. ಯಾವುದೇ ಕಳೇಬರ ಪತ್ತೆಯಾಗಿಲ್ಲ.</p>.<p>ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮಂಗಗಳ ಕಳೇಬರ ಪತ್ತೆಯಾದ ಬಗ್ಗೆ ಅಗತ್ಯ ಮಾಹಿತಿ ಪಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>