<p><strong>ತುಮಕೂರು:</strong> ಹಾಥರಸ್ ದುರ್ಘಟನೆ ನಡೆದು ಒಂದು ತಿಂಗಳಾದ ಮೇರೆಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ (ಎಐಎಂಎಸ್ಎಸ್) ಊರ್ಡಿಗೆರೆಯ ಬಸ್ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ರೈತ ಕೂಲಿ ಕಾರ್ಮಿಕರ ಸಂಘನೆಯ ರಾಜ್ಯ ಸಮಿತಿ ಸದಸ್ಯ ಎಸ್.ಎನ್.ಸ್ವಾಮಿ ಮಾತನಾಡಿ, ಬಹುಸಂಖ್ಯಾತರಾದ ಜನಸಾಮಾನ್ಯರ ಪರವಾದ ನೀತಿಗಳನ್ನು ಸರ್ಕಾರ ರೂಪಿಸಬೇಕು. ಆದರೆ ಇಂದಿನ ಎಲ್ಲ ರಾಜಕೀಯ ಪಕ್ಷಗಳೂ ಕಾರ್ಪೊರೇಟ್ ಮನೆತನಗಳ ಪರವಾಗಿವೆ ಎಂದು ದೂರಿದರು.</p>.<p>ಮಾಧ್ಯಮಗಳು ಮಹಿಳೆಯರನ್ನು ಭೋಗದ ವಸ್ತುಗಳು ಎಂದು ಬಿಂಬಿಸುತ್ತಿವೆ. ಯುವಕರ ಮನಸ್ಸನ್ನು ಕಲುಷಿತಗೊಳಿಸಲಾಗುತ್ತಿದೆ. ಇದರಿಂದ ಮಹಿಳೆಯರ ಮೇಲೆ ಅತ್ಯಾಚಾರಗಳು ಹೆಚ್ಚುತ್ತಿವೆ. ಉನ್ನತ ಆದರ್ಶಗಳ ಕೊರತೆ ಸಮಾಜವನ್ನು ಕಾಡುತ್ತಿದೆ ಎಂದರು.</p>.<p>ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕಲ್ಯಾಣಿ, ಹಾಥರಸ್ ಅತ್ಯಾಚಾರ ಪ್ರಕರಣಕ್ಕೆ ನಾಗರಿಕ ಸಮಾಜ ತಲೆತಗ್ಗಿಸಬೇಕು. ದುರಂತ ಎಂದರೆ ಮಾನವೀಯ ಮೌಲ್ಯಗಳನ್ನು ಸರ್ಕಾರ ಕಳೆದುಕೊಂಡಿದೆ. ರಾಮರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ನಿರೀಕ್ಷಿಸಲು ಸಾಧ್ಯವಿಲ್ಲ. ಉನ್ನತ ನೀತಿ, ಸಂಸ್ಕೃತಿ, ಸಮಾನತೆಯ ಸಮಾಜ ನಿರ್ಮಿಸಬೇಕು ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ರತ್ನಮ್ಮ,ಅಶ್ವಿನಿ, ಮಂಜುಳಾ, ವಿದ್ಯಾ, ಉಮಾದೇವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹಾಥರಸ್ ದುರ್ಘಟನೆ ನಡೆದು ಒಂದು ತಿಂಗಳಾದ ಮೇರೆಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ (ಎಐಎಂಎಸ್ಎಸ್) ಊರ್ಡಿಗೆರೆಯ ಬಸ್ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ರೈತ ಕೂಲಿ ಕಾರ್ಮಿಕರ ಸಂಘನೆಯ ರಾಜ್ಯ ಸಮಿತಿ ಸದಸ್ಯ ಎಸ್.ಎನ್.ಸ್ವಾಮಿ ಮಾತನಾಡಿ, ಬಹುಸಂಖ್ಯಾತರಾದ ಜನಸಾಮಾನ್ಯರ ಪರವಾದ ನೀತಿಗಳನ್ನು ಸರ್ಕಾರ ರೂಪಿಸಬೇಕು. ಆದರೆ ಇಂದಿನ ಎಲ್ಲ ರಾಜಕೀಯ ಪಕ್ಷಗಳೂ ಕಾರ್ಪೊರೇಟ್ ಮನೆತನಗಳ ಪರವಾಗಿವೆ ಎಂದು ದೂರಿದರು.</p>.<p>ಮಾಧ್ಯಮಗಳು ಮಹಿಳೆಯರನ್ನು ಭೋಗದ ವಸ್ತುಗಳು ಎಂದು ಬಿಂಬಿಸುತ್ತಿವೆ. ಯುವಕರ ಮನಸ್ಸನ್ನು ಕಲುಷಿತಗೊಳಿಸಲಾಗುತ್ತಿದೆ. ಇದರಿಂದ ಮಹಿಳೆಯರ ಮೇಲೆ ಅತ್ಯಾಚಾರಗಳು ಹೆಚ್ಚುತ್ತಿವೆ. ಉನ್ನತ ಆದರ್ಶಗಳ ಕೊರತೆ ಸಮಾಜವನ್ನು ಕಾಡುತ್ತಿದೆ ಎಂದರು.</p>.<p>ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕಲ್ಯಾಣಿ, ಹಾಥರಸ್ ಅತ್ಯಾಚಾರ ಪ್ರಕರಣಕ್ಕೆ ನಾಗರಿಕ ಸಮಾಜ ತಲೆತಗ್ಗಿಸಬೇಕು. ದುರಂತ ಎಂದರೆ ಮಾನವೀಯ ಮೌಲ್ಯಗಳನ್ನು ಸರ್ಕಾರ ಕಳೆದುಕೊಂಡಿದೆ. ರಾಮರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷೆ ನಿರೀಕ್ಷಿಸಲು ಸಾಧ್ಯವಿಲ್ಲ. ಉನ್ನತ ನೀತಿ, ಸಂಸ್ಕೃತಿ, ಸಮಾನತೆಯ ಸಮಾಜ ನಿರ್ಮಿಸಬೇಕು ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ರತ್ನಮ್ಮ,ಅಶ್ವಿನಿ, ಮಂಜುಳಾ, ವಿದ್ಯಾ, ಉಮಾದೇವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>