<p><strong>ಕೊರಟಗೆರೆ:</strong> ಶಿಕ್ಷಕರ ಜವಾಬ್ದಾರಿ ನೌಕರಿಗೆ ಸೀಮಿತವಾಗಬಾರದು. ಸಮಾಜ ಕಟ್ಟುವ ಕಾಯಕವೂ ಆಗಬೇಕು. ಶಿಕ್ಷಕರು ನಿತ್ಯ ಉತ್ಕೃಷ್ಟ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಶಾಸಕ ಡಾ.ಜಿ. ಪರಮೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕ ವೃತ್ತಿ ಕಲೆಯೂ ಹೌದು. ಪ್ರತಿ ಶಿಕ್ಷಕರು ನಿತ್ಯ ವಿದ್ಯಾರ್ಥಿಗಳಾಗಬೇಕು. ಹೊಸತನವನ್ನು ಅಭ್ಯಾಸಿಸಿ ಪ್ರತಿ ವಿಷಯಕ್ಕೂ ಜೀವ ತುಂಬಬೇಕು. ಪ್ರತಿ ತರಗತಿಯಲ್ಲೂ ಹೊಸತನ ಕಲಿಸಬೇಕು ಎಂದರು.</p>.<p>ದೇಶದಲ್ಲಿ 600ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ನೀಡುತ್ತಿದ್ದರೂ, ಭಾರತದ ಯಾವುದೇ ವಿಶ್ವವಿದ್ಯಾಲಯ ಪ್ರಪಂಚದ 100 ಅತ್ಯುತ್ತಮ ವಿಶ್ವವಿದ್ಯಾಲಯ ಪಟ್ಟಿಗಳಲ್ಲಿ ಬರದಿರುವುದು ದುರಾದೃಷ್ಟಕರ. ಆಧುನಿಕ ಶಿಕ್ಷಣ ಭಾರತದಲ್ಲಿ ದೊರೆಯುತ್ತಿದ್ದರೂ, ಅದು ಪ್ರಪಂಚದ ಶಿಕ್ಷಣದ ವೇಗಕ್ಕೆ ಹೋಲಿಸದರೆ ಹಿಂದೆ ಇದೆ. ಸರ್ಕಾರಗಳು ಶಿಕ್ಷಣ<br />ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೊಳಿಸಿದರೆ ವಿಶ್ವವಿದ್ಯಾನಿಲಯಗಳು ಅತ್ಯುನ್ನತ ಪಟ್ಟಿಗೆ ಸೇರ್ಪಡೆಯಾಗುತ್ತದೆ ಎಂದರು.</p>.<p>ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ, ಶಿಕ್ಷಣ ಕೇವಲ ಅಂಕಗಳಿಕೆಗೆ ಸೀಮಿತವಾಗದೇ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ. ಆ ಮೂಲಕ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕಿದೆ ಎಂದರು.</p>.<p>ಬಿಇಒ ಎನ್.ಎಸ್.ಸುಧಾಕರ್ ಮಾತನಾಡಿದರು. ಬಿಆರ್ಸಿ ಸುರೇಂದ್ರನಾಥ್, ಅಕ್ಷರ ದಾಸೋಹ ಅಧಿಕಾರಿ ಟಿ.ಆರ್.ರಘು, ತಾ.ಪಂ. ಇಒ ಎಸ್.ಶಿವಪ್ರಕಾಶ್, ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಪಟ್ಟಣ<br />ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಪಿಎಸ್ಐ ನಾಗರಾಜು, ಶಿಕ್ಷಕರಾದ ತಿಪ್ಪೇಸ್ವಾಮಿ, ಈಶ್ವರಯ್ಯ, ಲಕ್ಷ್ಮೀಪುತ್ರ, ಪರಮೇಶ್ವರ, ನರಸಿಂಹಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಶಿಕ್ಷಕರ ಜವಾಬ್ದಾರಿ ನೌಕರಿಗೆ ಸೀಮಿತವಾಗಬಾರದು. ಸಮಾಜ ಕಟ್ಟುವ ಕಾಯಕವೂ ಆಗಬೇಕು. ಶಿಕ್ಷಕರು ನಿತ್ಯ ಉತ್ಕೃಷ್ಟ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಶಾಸಕ ಡಾ.ಜಿ. ಪರಮೇಶ್ವರ ಹೇಳಿದರು.</p>.<p>ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕ ವೃತ್ತಿ ಕಲೆಯೂ ಹೌದು. ಪ್ರತಿ ಶಿಕ್ಷಕರು ನಿತ್ಯ ವಿದ್ಯಾರ್ಥಿಗಳಾಗಬೇಕು. ಹೊಸತನವನ್ನು ಅಭ್ಯಾಸಿಸಿ ಪ್ರತಿ ವಿಷಯಕ್ಕೂ ಜೀವ ತುಂಬಬೇಕು. ಪ್ರತಿ ತರಗತಿಯಲ್ಲೂ ಹೊಸತನ ಕಲಿಸಬೇಕು ಎಂದರು.</p>.<p>ದೇಶದಲ್ಲಿ 600ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ನೀಡುತ್ತಿದ್ದರೂ, ಭಾರತದ ಯಾವುದೇ ವಿಶ್ವವಿದ್ಯಾಲಯ ಪ್ರಪಂಚದ 100 ಅತ್ಯುತ್ತಮ ವಿಶ್ವವಿದ್ಯಾಲಯ ಪಟ್ಟಿಗಳಲ್ಲಿ ಬರದಿರುವುದು ದುರಾದೃಷ್ಟಕರ. ಆಧುನಿಕ ಶಿಕ್ಷಣ ಭಾರತದಲ್ಲಿ ದೊರೆಯುತ್ತಿದ್ದರೂ, ಅದು ಪ್ರಪಂಚದ ಶಿಕ್ಷಣದ ವೇಗಕ್ಕೆ ಹೋಲಿಸದರೆ ಹಿಂದೆ ಇದೆ. ಸರ್ಕಾರಗಳು ಶಿಕ್ಷಣ<br />ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೊಳಿಸಿದರೆ ವಿಶ್ವವಿದ್ಯಾನಿಲಯಗಳು ಅತ್ಯುನ್ನತ ಪಟ್ಟಿಗೆ ಸೇರ್ಪಡೆಯಾಗುತ್ತದೆ ಎಂದರು.</p>.<p>ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ, ಶಿಕ್ಷಣ ಕೇವಲ ಅಂಕಗಳಿಕೆಗೆ ಸೀಮಿತವಾಗದೇ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ. ಆ ಮೂಲಕ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕಿದೆ ಎಂದರು.</p>.<p>ಬಿಇಒ ಎನ್.ಎಸ್.ಸುಧಾಕರ್ ಮಾತನಾಡಿದರು. ಬಿಆರ್ಸಿ ಸುರೇಂದ್ರನಾಥ್, ಅಕ್ಷರ ದಾಸೋಹ ಅಧಿಕಾರಿ ಟಿ.ಆರ್.ರಘು, ತಾ.ಪಂ. ಇಒ ಎಸ್.ಶಿವಪ್ರಕಾಶ್, ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಪಟ್ಟಣ<br />ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಪಿಎಸ್ಐ ನಾಗರಾಜು, ಶಿಕ್ಷಕರಾದ ತಿಪ್ಪೇಸ್ವಾಮಿ, ಈಶ್ವರಯ್ಯ, ಲಕ್ಷ್ಮೀಪುತ್ರ, ಪರಮೇಶ್ವರ, ನರಸಿಂಹಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>