<p><strong>ತುಮಕೂರು:</strong> ತಾಲ್ಲೂಕಿನ ಸಿಂಗೋನಹಳ್ಳಿ ಕಾಲೊನಿಯಲ್ಲಿ ಮಂಗಳವಾರ ನಡೆದ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಮೃತ ಮಹಿಳೆಯ ಅತ್ತೆ ರೇಣುಕಮ್ಮ (50) ಎಂಬುವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಸಂಪತ್ ಕುಮಾರ್ ಪತ್ನಿ ವಿಜಯಲಕ್ಷ್ಮಿ (26) ತನ್ನ ಐದು ವರ್ಷದ ಅವಳಿ ಮಕ್ಕಳಾದ ಚೇತನ ಹಾಗೂ ಚೈತನ್ಯ ಎಂಬುವರನ್ನು ನೀರಿನ ಸಂಪ್ನಲ್ಲಿ ಮುಳುಗಿಸಿ, ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>‘ಅತ್ತೆ ಕಿರುಕುಳದಿಂದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ತರುವಂತೆ ಒತ್ತಡ ಹೇರುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ವಿಜಯಲಕ್ಷ್ಮಿ ತಂಗಿ ಮೇಘನಾ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>‘ಗಂಡ, ಮಾವ ಬಿಟ್ಟು ಅತ್ತೆ ಮೇಲೆ ಮಾತ್ರ ದೂರು ಸಲ್ಲಿಕೆಯಾಗಿದೆ. ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬುಧವಾರ ರೇಣುಕಮ್ಮ ಅವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ಸಿಂಗೋನಹಳ್ಳಿ ಕಾಲೊನಿಯಲ್ಲಿ ಮಂಗಳವಾರ ನಡೆದ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಮೃತ ಮಹಿಳೆಯ ಅತ್ತೆ ರೇಣುಕಮ್ಮ (50) ಎಂಬುವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಸಂಪತ್ ಕುಮಾರ್ ಪತ್ನಿ ವಿಜಯಲಕ್ಷ್ಮಿ (26) ತನ್ನ ಐದು ವರ್ಷದ ಅವಳಿ ಮಕ್ಕಳಾದ ಚೇತನ ಹಾಗೂ ಚೈತನ್ಯ ಎಂಬುವರನ್ನು ನೀರಿನ ಸಂಪ್ನಲ್ಲಿ ಮುಳುಗಿಸಿ, ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>‘ಅತ್ತೆ ಕಿರುಕುಳದಿಂದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ತರುವಂತೆ ಒತ್ತಡ ಹೇರುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ವಿಜಯಲಕ್ಷ್ಮಿ ತಂಗಿ ಮೇಘನಾ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>‘ಗಂಡ, ಮಾವ ಬಿಟ್ಟು ಅತ್ತೆ ಮೇಲೆ ಮಾತ್ರ ದೂರು ಸಲ್ಲಿಕೆಯಾಗಿದೆ. ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬುಧವಾರ ರೇಣುಕಮ್ಮ ಅವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>