<p><strong>ತುಮಕೂರು</strong>: ಎಲ್ಲರಿಗೂ ಸೂರು ಯೋಜನೆಯಡಿ 2022ರ ಒಳಗೆ ವಸತಿ ರಹಿತರಿಗೆ ನಿವೇಶನ ನೀಡಬೇಕಾಗಿದೆ. ಈ ಕಾರಣದಿಂದ ಒಂದು ತಿಂಗಳ ಒಳಗೆ ಸರ್ಕಾರಿ ಜಮೀನು ಗುರುತಿಸಿ ಜಿಐಎಸ್ ಲೇಯರ್ ಮಾಡಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಂಸದ ಜಿ.ಎಸ್.ಬಸವರಾಜ್ ಅವರಿಗೆ ಮಾಹಿತಿ ನೀಡಿದರು.</p>.<p>ನಗರದ ಸಾಯಿಬಾಬಾ ದೇಗುಲದ ಸಭಾಂಗಣದಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆ, ದಿಶಾ ಸಮಿತಿ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದರು.</p>.<p>ಅಧಿಕಾರಿಗಳು ಬಡವರಿಗೆ ಸೇವೆ ಮಾಡಲೇಬೇಕು ಎಂದು ಮನಸ್ಸು ಮಾಡಿದರೆ ನಿವೇಶನ ನೀಡುವುದು ಸಮಸ್ಯೆಯೇ ಅಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮವಾರು ಸರ್ಕಾರಿ ಜಮೀನು ಗುರುತಿಸುವಂತೆ ತಿಳಿಸಿದರು.</p>.<p>ಗುಬ್ಬಿ ತಾಲ್ಲೂಕು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಲ್ಲಿನ ಎಲ್ಲಾ ವಿಧವಾದ ‘ಸರ್ಕಾರಿ ಜಮೀನುಗಳ ಜಿಐಎಸ್ ಲೇಯರ್’ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪವಿಭಾಗಾಧಿಕಾರಿ ಅಜಯ್ ಮಾತನಾಡಿದರು. ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ತಹಶೀಲ್ದಾರರಾದ ಮೋಹನ್ ಕುಮಾರ್, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಎಲ್ಲರಿಗೂ ಸೂರು ಯೋಜನೆಯಡಿ 2022ರ ಒಳಗೆ ವಸತಿ ರಹಿತರಿಗೆ ನಿವೇಶನ ನೀಡಬೇಕಾಗಿದೆ. ಈ ಕಾರಣದಿಂದ ಒಂದು ತಿಂಗಳ ಒಳಗೆ ಸರ್ಕಾರಿ ಜಮೀನು ಗುರುತಿಸಿ ಜಿಐಎಸ್ ಲೇಯರ್ ಮಾಡಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಂಸದ ಜಿ.ಎಸ್.ಬಸವರಾಜ್ ಅವರಿಗೆ ಮಾಹಿತಿ ನೀಡಿದರು.</p>.<p>ನಗರದ ಸಾಯಿಬಾಬಾ ದೇಗುಲದ ಸಭಾಂಗಣದಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆ, ದಿಶಾ ಸಮಿತಿ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದರು.</p>.<p>ಅಧಿಕಾರಿಗಳು ಬಡವರಿಗೆ ಸೇವೆ ಮಾಡಲೇಬೇಕು ಎಂದು ಮನಸ್ಸು ಮಾಡಿದರೆ ನಿವೇಶನ ನೀಡುವುದು ಸಮಸ್ಯೆಯೇ ಅಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮವಾರು ಸರ್ಕಾರಿ ಜಮೀನು ಗುರುತಿಸುವಂತೆ ತಿಳಿಸಿದರು.</p>.<p>ಗುಬ್ಬಿ ತಾಲ್ಲೂಕು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದು, ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಲ್ಲಿನ ಎಲ್ಲಾ ವಿಧವಾದ ‘ಸರ್ಕಾರಿ ಜಮೀನುಗಳ ಜಿಐಎಸ್ ಲೇಯರ್’ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪವಿಭಾಗಾಧಿಕಾರಿ ಅಜಯ್ ಮಾತನಾಡಿದರು. ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ತಹಶೀಲ್ದಾರರಾದ ಮೋಹನ್ ಕುಮಾರ್, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>