ಸ್ಮಾರ್ಟ್ ಸಿಟಿ ವತಿಯಿಂದ ₹20 ಕೋಟಿ ವೆಚ್ಚದಲ್ಲಿ ತುಮಕೂರು ತಾಲೂಕಿನ ಅಮಲಾಪುರ, ಯಲ್ಲಾಪುರ, ಅರಕೆರೆ, ಅಜ್ಜಪ್ಪನಹಳ್ಳಿ, ವೀರನಕಲ್ಲು, ಸ್ವಾಂದೇನಹಳ್ಳಿ ಮತ್ತು ಮುತ್ಸಂದ್ರ ಗ್ರಾಮಗಳಲ್ಲಿ ಸಂಶೋಧನಾ ಕೇಂದ್ರ ಮತ್ತು ಸ್ಕಿಲ್ ಪಾರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕಗಳಿಗೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ಆಹಾರ ಸಂಸ್ಕರಣ ಘಟಕಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಡೆನ್ಮಾರ್ಕ್ ಮಾದರಿಯಲ್ಲಿ ವಸತಿ ಸೌಕರ್ಯಗಳನ್ನು ಒಳಗೊಂಡಂತೆ 342 ಉತ್ಪನ್ನಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.