<p><strong>ಶಿರಾ: </strong>ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಲ್ಲಿನಗರಸಭೆ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಆರೋಪಿಸಿದರು.</p>.<p>ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ದೊಡ್ಡ ಕೆರೆಯ ಜಲ ಸಂಗ್ರಹಗಾರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ<br />ಮಾತನಾಡಿದರು.</p>.<p>ಕೆರೆಯಲ್ಲಿ ಸಾಕಷ್ಟು ನೀರಿದ್ದರೂ, ಶುದ್ಧೀಕರಣ ಘಟಕದ ಯಂತ್ರ ಕೆಟ್ಟಿದೆ ಎಂದು ದುರಸ್ತಿ ಮಾಡದೇ ಕೊಳಚೆ ನೀರು ಪೂರೈಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಅವರು ಮನೆಗಳಿಗೆ ಕೊಳಚೆ ನೀರು ಪೂರೈಕೆ ಮಾಡಿರುವುದರಿಂದ ಮನೆಯಲ್ಲಿ ನೀರಿನ ಶೇಖರಣೆ ಮಾಡುವ ತೊಟ್ಟಿಗಳು ಕಲುಷಿತವಾಗಿದೆ. ಇದನ್ನು ಸ್ವಚ್ಛಗೊಳಿಸಲು ನೂರಾರು ರೂಪಾಯಿ ತೆರಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ನಗರಸಭೆ ಒಂದು ವರ್ಷದ ನೀರಿನ ಕಂದಾಯವನ್ನು ಮನ್ನಾ ಮಾಡಬೇಕು ಎಂದರು.</p>.<p>ನಗರಸಭೆಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಸಮಯದಲ್ಲಿ ಶಾಸಕರು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು. ಆದರೆ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡಲು ಶಾಸಕರು ವಿಫಲವಾಗಿದ್ದು ಜನರು ಸಂಕಷ್ಟ ಪಡುವಂತಾಗಿದೆ ಎಂದರು.</p>.<p>ಮುಖಂಡರಾದ ಅಮಾನುಲ್ಲಾಖಾನ್, ಜಾಫರ್, ಪಾಂಡುರಂಗಪ್ಪ, ಹಬೀಬ್ ಖಾನ್, ಶ್ರೀನಿವಾಸ್, ಜೀಷಾನ್ ಅಹಮದ್, ಹರೀಶ್, ಬುರ್ರಾನ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಲ್ಲಿನಗರಸಭೆ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಆರೋಪಿಸಿದರು.</p>.<p>ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ದೊಡ್ಡ ಕೆರೆಯ ಜಲ ಸಂಗ್ರಹಗಾರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ<br />ಮಾತನಾಡಿದರು.</p>.<p>ಕೆರೆಯಲ್ಲಿ ಸಾಕಷ್ಟು ನೀರಿದ್ದರೂ, ಶುದ್ಧೀಕರಣ ಘಟಕದ ಯಂತ್ರ ಕೆಟ್ಟಿದೆ ಎಂದು ದುರಸ್ತಿ ಮಾಡದೇ ಕೊಳಚೆ ನೀರು ಪೂರೈಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.</p>.<p>ನಗರಸಭೆ ಅವರು ಮನೆಗಳಿಗೆ ಕೊಳಚೆ ನೀರು ಪೂರೈಕೆ ಮಾಡಿರುವುದರಿಂದ ಮನೆಯಲ್ಲಿ ನೀರಿನ ಶೇಖರಣೆ ಮಾಡುವ ತೊಟ್ಟಿಗಳು ಕಲುಷಿತವಾಗಿದೆ. ಇದನ್ನು ಸ್ವಚ್ಛಗೊಳಿಸಲು ನೂರಾರು ರೂಪಾಯಿ ತೆರಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ನಗರಸಭೆ ಒಂದು ವರ್ಷದ ನೀರಿನ ಕಂದಾಯವನ್ನು ಮನ್ನಾ ಮಾಡಬೇಕು ಎಂದರು.</p>.<p>ನಗರಸಭೆಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಸಮಯದಲ್ಲಿ ಶಾಸಕರು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು. ಆದರೆ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡಲು ಶಾಸಕರು ವಿಫಲವಾಗಿದ್ದು ಜನರು ಸಂಕಷ್ಟ ಪಡುವಂತಾಗಿದೆ ಎಂದರು.</p>.<p>ಮುಖಂಡರಾದ ಅಮಾನುಲ್ಲಾಖಾನ್, ಜಾಫರ್, ಪಾಂಡುರಂಗಪ್ಪ, ಹಬೀಬ್ ಖಾನ್, ಶ್ರೀನಿವಾಸ್, ಜೀಷಾನ್ ಅಹಮದ್, ಹರೀಶ್, ಬುರ್ರಾನ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>