ಪುರಸಭೆ ಸದಸ್ಯ ಆನಂದ್ ಕುಮಾರ್ ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಮುಖ್ಯಾಧಿಕಾರಿ ತಿಂಗಳ ಹಿಂದೆಯೇ ಸೂಚನೆ ನೀಡಿ, ಸದಸ್ಯರ ಗಮನಕ್ಕೂ ತಂದರೂ, ಪ್ರಯೋಜನವಾಗದ ಕಾರಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿ, ಪೊಲೀಸರ ಸಹಕಾರದಿಂದ ಅತಿಕ್ರಮಿಸಿ ನಿರ್ಮಿಸಿಕೊಂಡಿದ್ದ ಕಟ್ಟಡವನ್ನು ತೆರವುಗೊಳಿಸಿ, ನಿವೇಶನ ವಶಕ್ಕೆ ಪಡೆದು, ಎಚ್ಚರಿಕೆಯ ಫಲಕ ಅಳವಡಿಸಿದ್ದಾರೆ.