ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Last Updated 23 ಡಿಸೆಂಬರ್ 2020, 3:48 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಕಿಲಾರ ಗ್ರಾಮದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ವಿನಯ್ (36) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಮಾಡಿದ್ದಾರೆ.

ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವಿನಯ್, ಕಿಲಾರ ಗ್ರಾಮದ ಗಂಗಾಧರಪ್ಪ ಅವರ ಮಗನಾದ ಪ್ರಕಾಶ್ ಅವರನ್ನು ತಾಲ್ಲೂಕಿನ ಸಂತೆಮಾವತ್ತೂರು ಬಳಿ 2008ರಲ್ಲಿ ಕೊಲೆಮಾಡಿದ್ದನು. 2015ರಲ್ಲಿ ಗಂಗಾಧರಪ್ಪ ಅವರನ್ನು ಕಿಲಾರ ಗ್ರಾಮದಲ್ಲಿ ಕೊಲೆ ಮಾಡಿದ್ದ ಆರೋಪವಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ನಂತರ ನ್ಯಾಯಾಲಯದಲ್ಲಿ ಖುಲಾಸೆಯಾಗಿತ್ತು.

ಎರಡು ವರ್ಷಗಳಿಂದ ಗ್ರಾಮದಲ್ಲಿದ್ದಕೊಂಡು ಹಾಲಿನ ವ್ಯಾಪಾರದ ಜತೆ ಪನ್ನೀರ್ ತಯಾರಿಸಿ ಮಾರಾಟ ಮಾಡುತ್ತಿದ್ದ ವಿನಯ್‌ನನ್ನು ಸೋಮವಾರ ರಾತ್ರಿ ಮನೆ ಸಮೀಪದ ಬೋರಯ್ಯನವರ ಜಮೀನಿನ ಬಳಿ ಕೊಲೆಮಾಡಲಾಗಿದೆ. ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಹುಲಿಯೂರದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಹೋದರ ಆದರ್ಶ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಡಿವೈಎಸ್‌ಪಿ ಜಗದೀಶ್, ಸಿಪಿಐ ಗುರುಪ್ರಸಾಧ್ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT