<p><strong>ತುಮಕೂರು: </strong>ಗಡಿಯಲ್ಲಿ ದೇಶದ ರಕ್ಷಣೆಗೆ ನಿಂತಿರುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಹಾಲಪ್ಪ ಪ್ರತಿಷ್ಠಾನದಿಂದ ಸಿದ್ಧಗಂಗಾ ಮಠದಲ್ಲಿ ಶನಿವಾರ ಸಹಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಸಿದ್ಧಲಿಂಗಸ್ವಾಮೀಜಿ ಸಹಿ ಮಾಡುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿ, ‘ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ. ಸೈನಿಕರು ಪ್ರಾಣದ ಹಂಗು ತೊರೆದು ದೇಶವನ್ನು ರಕ್ಷಿಸುತ್ತಿದ್ದಾರೆ’ ಎಂದು ಸ್ಮರಿಸಿದರು.</p>.<p>ದೇಶ ಕಾಯುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಅರ್ಪಿಸಬೇಕು. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಸೈನಿಕರ ಜೊತೆ ಇದ್ದೇವೆ ಎನ್ನುವ ಸಂದೇಶವನ್ನು ತಲುಪಿಸುವುದಕ್ಕೆ ಸಹಿ ಸಂಗ್ರಹ ಮಾಡುತ್ತಿರುವುದು ಶ್ಲಾಘನೀಯ ಎಂದರು.</p>.<p>ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ‘ಸಿದ್ಧಗಂಗಾ ಮಠದ ಆವರಣದಿಂದ ಶ್ರೀಗಳ ಆಶೀರ್ವಾದದೊಂದಿಗೆ 10 ಸಾವಿರ ಸಹಿ ಸಂಗ್ರಹಮಾಡಿ ಸೈನ್ಯದ ಮುಖ್ಯಸ್ಥರಾದ ಜ.ಬಿಪಿನ್ ರಾವತ್ ಅವರಿಗೆ ಕಳುಹಿಸಿಕೊಡಲಾಗುವುದು’ ಎಂದರು.</p>.<p>ಮಾಜಿ ಸೈನಿಕರಾದ ರೇಣುಕಾಪ್ರಸಾದ್, ನಂಜುಂಡಯ್ಯ, ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್.ರೇವಣ್ಣ, ಎಂ.ಬಸವಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಗಡಿಯಲ್ಲಿ ದೇಶದ ರಕ್ಷಣೆಗೆ ನಿಂತಿರುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಹಾಲಪ್ಪ ಪ್ರತಿಷ್ಠಾನದಿಂದ ಸಿದ್ಧಗಂಗಾ ಮಠದಲ್ಲಿ ಶನಿವಾರ ಸಹಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಸಿದ್ಧಲಿಂಗಸ್ವಾಮೀಜಿ ಸಹಿ ಮಾಡುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿ, ‘ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ. ಸೈನಿಕರು ಪ್ರಾಣದ ಹಂಗು ತೊರೆದು ದೇಶವನ್ನು ರಕ್ಷಿಸುತ್ತಿದ್ದಾರೆ’ ಎಂದು ಸ್ಮರಿಸಿದರು.</p>.<p>ದೇಶ ಕಾಯುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಅರ್ಪಿಸಬೇಕು. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಸೈನಿಕರ ಜೊತೆ ಇದ್ದೇವೆ ಎನ್ನುವ ಸಂದೇಶವನ್ನು ತಲುಪಿಸುವುದಕ್ಕೆ ಸಹಿ ಸಂಗ್ರಹ ಮಾಡುತ್ತಿರುವುದು ಶ್ಲಾಘನೀಯ ಎಂದರು.</p>.<p>ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ‘ಸಿದ್ಧಗಂಗಾ ಮಠದ ಆವರಣದಿಂದ ಶ್ರೀಗಳ ಆಶೀರ್ವಾದದೊಂದಿಗೆ 10 ಸಾವಿರ ಸಹಿ ಸಂಗ್ರಹಮಾಡಿ ಸೈನ್ಯದ ಮುಖ್ಯಸ್ಥರಾದ ಜ.ಬಿಪಿನ್ ರಾವತ್ ಅವರಿಗೆ ಕಳುಹಿಸಿಕೊಡಲಾಗುವುದು’ ಎಂದರು.</p>.<p>ಮಾಜಿ ಸೈನಿಕರಾದ ರೇಣುಕಾಪ್ರಸಾದ್, ನಂಜುಂಡಯ್ಯ, ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್.ರೇವಣ್ಣ, ಎಂ.ಬಸವಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>