<p><strong>ತಿಪಟೂರು</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮದೀನ ಮಸೀದಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ಉಗ್ರ ಕೃತ್ಯವನ್ನು ಖಂಡಿಸಲಾಯಿತು. ಮದೀನ ಮಸೀದಿಯಲ್ಲಿ ನಮಾಜ್ ಮುಗಿಸಿದ ಮುಸ್ಲಿಮರು ಮಸೀದಿ ಮುಂಭಾಗ ಸೇರಿ ಪ್ರತಿಭಟಿಸಿದರು.</p>.<p>ಮದೀನ ಮಸೀದಿ ಮುಖಂಡ ಮಹಮದ್ ದಸ್ತಗಿರ್ ಮಾತನಾಡಿ, 'ಕಾಶ್ಮೀರದಲ್ಲಿ ಭಯೋತ್ಪಾದಕರ ಕೃತ್ಯವನ್ನು ಭಾರತದ ಸಮಸ್ತ ಮುಸ್ಲಿಮರು ಖಂಡಿಸುತ್ತೇವೆ, ನಮ್ಮ ತಾಯ್ನಾಡಿಗೆ, ಕೇಡುಮಾಡುವ ಉಗ್ರಗಾಮಿ ಕೃತ್ಯ ಸಹಿಸುವುದಿಲ್ಲ. ಮನುಷ್ಯತ್ವ ವಿರೋಧಿಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.</p>.<p>ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ. ಮಾತನಾಡಿ, ಪಹಲ್ಗಾಮ್ ಕೃತ್ಯ ಮನುಷ್ಯತ್ವಕ್ಕೆ ಮಾರಕವಾದ ಕೃತ್ಯ. ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಸೌಹಾರ್ದದಿಂದ ಬದುಕುತ್ತಿದ್ದೇವೆ. ಸರ್ಕಾರ ಉಗ್ರಗಾಮಿ ಕೃತ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮಹಮದ್ ದಸ್ತಗಿರ್, ಸೈಫುಲ್ಲ ಎಂ., ನವೀದ್ ಆಲಂ, ಮುನ್ನಾವರ್ಪಾಷಾ, ಖಲೀಂಸಾಬ್, ಎಚ್.ಬಿ.ಖಲೀಂಖಾನ್, ಅಜ್ಗರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮದೀನ ಮಸೀದಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ಉಗ್ರ ಕೃತ್ಯವನ್ನು ಖಂಡಿಸಲಾಯಿತು. ಮದೀನ ಮಸೀದಿಯಲ್ಲಿ ನಮಾಜ್ ಮುಗಿಸಿದ ಮುಸ್ಲಿಮರು ಮಸೀದಿ ಮುಂಭಾಗ ಸೇರಿ ಪ್ರತಿಭಟಿಸಿದರು.</p>.<p>ಮದೀನ ಮಸೀದಿ ಮುಖಂಡ ಮಹಮದ್ ದಸ್ತಗಿರ್ ಮಾತನಾಡಿ, 'ಕಾಶ್ಮೀರದಲ್ಲಿ ಭಯೋತ್ಪಾದಕರ ಕೃತ್ಯವನ್ನು ಭಾರತದ ಸಮಸ್ತ ಮುಸ್ಲಿಮರು ಖಂಡಿಸುತ್ತೇವೆ, ನಮ್ಮ ತಾಯ್ನಾಡಿಗೆ, ಕೇಡುಮಾಡುವ ಉಗ್ರಗಾಮಿ ಕೃತ್ಯ ಸಹಿಸುವುದಿಲ್ಲ. ಮನುಷ್ಯತ್ವ ವಿರೋಧಿಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.</p>.<p>ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ. ಮಾತನಾಡಿ, ಪಹಲ್ಗಾಮ್ ಕೃತ್ಯ ಮನುಷ್ಯತ್ವಕ್ಕೆ ಮಾರಕವಾದ ಕೃತ್ಯ. ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಸೌಹಾರ್ದದಿಂದ ಬದುಕುತ್ತಿದ್ದೇವೆ. ಸರ್ಕಾರ ಉಗ್ರಗಾಮಿ ಕೃತ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮಹಮದ್ ದಸ್ತಗಿರ್, ಸೈಫುಲ್ಲ ಎಂ., ನವೀದ್ ಆಲಂ, ಮುನ್ನಾವರ್ಪಾಷಾ, ಖಲೀಂಸಾಬ್, ಎಚ್.ಬಿ.ಖಲೀಂಖಾನ್, ಅಜ್ಗರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>