<p><strong>ತುಮಕೂರು</strong>: ವಿಗ್ರಹ ಆರಾಧನೆಯನ್ನು ಮುಸ್ಲಿಂ ಧರ್ಮದವರು ಒಪ್ಪುವುದಿಲ್ಲ. ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸಲು ರಾಜ್ಯದ ಜನತೆಯೂ ಒಪ್ಪಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ತನ್ವಿರ್ ಸೇಠ್ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಅವರು ವೈಯಕ್ತಿಕವಾಗಿ ಏನಾದರೂ ಮಾಡಿಕೊಳ್ಳಲಿ. ಸಾರ್ವಜನಿಕವಾಗಿ ಪ್ರತಿಮೆ ನಿರ್ಮಾಣ ಮಾಡಲು ಮುಸ್ಲಿಮರೇ ಒಪ್ಪಲ್ಲ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಕೋಲಾರವೂ ಸುರಕ್ಷಿತಅಲ್ಲ. ಅವರು ಚಿಕ್ಕನಾಯಕನಹಳ್ಳಿಗೆ ಬಂದರೆ ಸ್ವಾಗತಿಸುತ್ತೇನೆ. ತವರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಗೆಲುವು ಸಿಗುವುದಿಲ್ಲ ಎನ್ನುವುದು ಕಳೆದ ಬಾರಿ ಸಾಬೀತಾಗಿದೆ. ಹಾಗಾಗಿ ಅವರು ಬೇರೆ ಕ್ಷೇತ್ರಗಳನ್ನು ಹುಡುಕುತ್ತಿದ್ದಾರೆ ಎಂದೂ ಹೇಳಿದರು.</p>.<p>*</p>.<p>ಸಿದ್ದರಾಮಯ್ಯ ಅವರು ಇದ್ದ ಕ್ಷೇತ್ರ ಬಿಟ್ಟು ಬೇರೆ ಕಡೆ ಯಾಕೆ ಹೋಗುತ್ತಿದ್ದಾರೆ ಅಂತಾ ನಮಗೆ ಅರ್ಥವಾಗುತ್ತಿಲ್ಲ. ತವರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡದೆ, ಬೇರೆ ಜಾಗ ಹುಡುಕುತ್ತಿದ್ದಾರೆ.<br /><em><strong>-ಬಿ.ಎಸ್.ಯಡಿಯೂರಪ್ಪ, ಶಾಸಕ</strong></em></p>.<p><em><strong>*</strong></em></p>.<p>ವಿನಾಶಕಾಲೇ ವಿಪರೀತ ಬುದ್ಧಿ. ಕಾಂಗ್ರೆಸ್ ಇಡೀ ದೇಶದಲ್ಲಿ ವಿನಾಶದತ್ತ ಹೋಗುತ್ತಿದೆ. ಶಾಸಕ ತನ್ವೀರ್ ಸೇಠ್ ಅವರ ಹೇಳಿಕೆ ಕಾಂಗ್ರೆಸ್ ಅಭಿಪ್ರಾಯವಾಗಿರುತ್ತದೆ.<br /><em><strong>-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿಗ್ರಹ ಆರಾಧನೆಯನ್ನು ಮುಸ್ಲಿಂ ಧರ್ಮದವರು ಒಪ್ಪುವುದಿಲ್ಲ. ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸಲು ರಾಜ್ಯದ ಜನತೆಯೂ ಒಪ್ಪಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.</p>.<p>ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ತನ್ವಿರ್ ಸೇಠ್ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಅವರು ವೈಯಕ್ತಿಕವಾಗಿ ಏನಾದರೂ ಮಾಡಿಕೊಳ್ಳಲಿ. ಸಾರ್ವಜನಿಕವಾಗಿ ಪ್ರತಿಮೆ ನಿರ್ಮಾಣ ಮಾಡಲು ಮುಸ್ಲಿಮರೇ ಒಪ್ಪಲ್ಲ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಕೋಲಾರವೂ ಸುರಕ್ಷಿತಅಲ್ಲ. ಅವರು ಚಿಕ್ಕನಾಯಕನಹಳ್ಳಿಗೆ ಬಂದರೆ ಸ್ವಾಗತಿಸುತ್ತೇನೆ. ತವರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಗೆಲುವು ಸಿಗುವುದಿಲ್ಲ ಎನ್ನುವುದು ಕಳೆದ ಬಾರಿ ಸಾಬೀತಾಗಿದೆ. ಹಾಗಾಗಿ ಅವರು ಬೇರೆ ಕ್ಷೇತ್ರಗಳನ್ನು ಹುಡುಕುತ್ತಿದ್ದಾರೆ ಎಂದೂ ಹೇಳಿದರು.</p>.<p>*</p>.<p>ಸಿದ್ದರಾಮಯ್ಯ ಅವರು ಇದ್ದ ಕ್ಷೇತ್ರ ಬಿಟ್ಟು ಬೇರೆ ಕಡೆ ಯಾಕೆ ಹೋಗುತ್ತಿದ್ದಾರೆ ಅಂತಾ ನಮಗೆ ಅರ್ಥವಾಗುತ್ತಿಲ್ಲ. ತವರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡದೆ, ಬೇರೆ ಜಾಗ ಹುಡುಕುತ್ತಿದ್ದಾರೆ.<br /><em><strong>-ಬಿ.ಎಸ್.ಯಡಿಯೂರಪ್ಪ, ಶಾಸಕ</strong></em></p>.<p><em><strong>*</strong></em></p>.<p>ವಿನಾಶಕಾಲೇ ವಿಪರೀತ ಬುದ್ಧಿ. ಕಾಂಗ್ರೆಸ್ ಇಡೀ ದೇಶದಲ್ಲಿ ವಿನಾಶದತ್ತ ಹೋಗುತ್ತಿದೆ. ಶಾಸಕ ತನ್ವೀರ್ ಸೇಠ್ ಅವರ ಹೇಳಿಕೆ ಕಾಂಗ್ರೆಸ್ ಅಭಿಪ್ರಾಯವಾಗಿರುತ್ತದೆ.<br /><em><strong>-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>