<p><strong>ಪಾವಗಡ:</strong> ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ದೇಗುಲದ ಬಳಿ ಶುಕ್ರವಾರ ಮೇವು ಬ್ಯಾಂಕ್ಗೆ ಚಾಲನೆ ನೀಡಲಾಯಿತು.</p>.<p>ಜಿಲ್ಲೆಯಲ್ಲಿಯೇ ಮೊದಲ ಮೇವು ಬ್ಯಾಂಕ್ ಗ್ರಾಮದಲ್ಲಿ ಆರಂಭವಾದ ಕೂಡಲೇ ಸುತ್ತಮುತ್ತಲ ಗ್ರಾಮಗಳ ರೈತರು ಬಂದು ಜಾನುವಾರುಗಳಿಗಾಗಿ ಮೇವು ಕೊಂಡೊಯ್ದರು.</p>.<p>ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ನಾಗಲಮಡಿಕೆಯಲ್ಲಿ ಇದೀಗ ಮೇವು ಬ್ಯಾಂಕ್ ಆರಂಬಿಸಲಾಗಿದೆ. ವೈ.ಎನ್. ಹೊಸಕೋಟೆಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರ ಅಲ್ಲಿಯೂ ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಒಂದು ಜಾನುವಾರಿಗೆ ದಿನಕ್ಕೆ 6 ಕೆ.ಜಿ ಯಂತೆ ವಾರಕ್ಕೆ 42 ಕೆಜಿ ಮೇವು ವಿತರಿಸಲಾಗುತ್ತಿದೆ. ಒಂದು ಕೆ.ಜಿ. ಮೇವಿಗೆ ₹2 ನಿಗದಿಪಡಿಸಲಾಗಿದೆ. ಶುಕ್ರವಾರ 55 ರೈತರ 260 ಜಾನುವಾರುಗಳಿಗೆ ಸಾಕಾಗುವಷ್ಟು 10,920 ಕೆ.ಜಿ ಮೇವು ವಿತರಿಸಲಾಗಿದೆ. ಶನಿವಾರ 350 ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ದಿನದಿಂದ ದಿನಕ್ಕೆ ಮೇವು ಪಡೆಯುವ ರೈತರ ಸಂಖ್ಯೆ ಹೆಚ್ಚುತ್ತಿದೆ. ಬೇಡಿಕೆಗೆ ತಕ್ಕಂತೆ ಮೇವು ಸರಬರಾಜು ಮಾಡಲಾಗುತ್ತಿದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ವರಕೇರಪ್ಪ ಮಾಹಿತಿ ನೀಡಿದರು.</p>.<p>ಹರಾಜು ಪಡೆದವರು ಆಂಧ್ರದಿಂದ ಮೇವು ಸರಬರಾಜು ಮಾಡುತ್ತಿದ್ದಾರೆ. ಶುಕ್ರವಾರ ಭತ್ತದ ಮೇವು ವಿತರಿಸಲಾಗಿದೆ. ಶನಿವಾರ ಮೆಕ್ಕೆ ಜೋಳದ ಮೇವು ವಿತರಿಸಲಾಗಿದೆ. ತೀವ್ರ ಬರ ಇರುವುದರಿಂದ ಜಾನುವಾರುಗಳಿಗೆ ಮೇವು ನೀಡಲಾಗದೆ ಪರದಾಡುತ್ತಿದ್ದ ನಾಗಲಮಡಿಕೆ ಹೋಬಳಿ ರೈತರು ಸಂತಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಇತರೆ ಮೂರು ಹೋಬಳಿಗಳಲ್ಲೂ ಶೀಘ್ರ ಮೇವು ಬ್ಯಾಂಕ್ ಆರಂಭಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ದೇಗುಲದ ಬಳಿ ಶುಕ್ರವಾರ ಮೇವು ಬ್ಯಾಂಕ್ಗೆ ಚಾಲನೆ ನೀಡಲಾಯಿತು.</p>.<p>ಜಿಲ್ಲೆಯಲ್ಲಿಯೇ ಮೊದಲ ಮೇವು ಬ್ಯಾಂಕ್ ಗ್ರಾಮದಲ್ಲಿ ಆರಂಭವಾದ ಕೂಡಲೇ ಸುತ್ತಮುತ್ತಲ ಗ್ರಾಮಗಳ ರೈತರು ಬಂದು ಜಾನುವಾರುಗಳಿಗಾಗಿ ಮೇವು ಕೊಂಡೊಯ್ದರು.</p>.<p>ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ನಾಗಲಮಡಿಕೆಯಲ್ಲಿ ಇದೀಗ ಮೇವು ಬ್ಯಾಂಕ್ ಆರಂಬಿಸಲಾಗಿದೆ. ವೈ.ಎನ್. ಹೊಸಕೋಟೆಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರ ಅಲ್ಲಿಯೂ ಆರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಒಂದು ಜಾನುವಾರಿಗೆ ದಿನಕ್ಕೆ 6 ಕೆ.ಜಿ ಯಂತೆ ವಾರಕ್ಕೆ 42 ಕೆಜಿ ಮೇವು ವಿತರಿಸಲಾಗುತ್ತಿದೆ. ಒಂದು ಕೆ.ಜಿ. ಮೇವಿಗೆ ₹2 ನಿಗದಿಪಡಿಸಲಾಗಿದೆ. ಶುಕ್ರವಾರ 55 ರೈತರ 260 ಜಾನುವಾರುಗಳಿಗೆ ಸಾಕಾಗುವಷ್ಟು 10,920 ಕೆ.ಜಿ ಮೇವು ವಿತರಿಸಲಾಗಿದೆ. ಶನಿವಾರ 350 ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ದಿನದಿಂದ ದಿನಕ್ಕೆ ಮೇವು ಪಡೆಯುವ ರೈತರ ಸಂಖ್ಯೆ ಹೆಚ್ಚುತ್ತಿದೆ. ಬೇಡಿಕೆಗೆ ತಕ್ಕಂತೆ ಮೇವು ಸರಬರಾಜು ಮಾಡಲಾಗುತ್ತಿದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ವರಕೇರಪ್ಪ ಮಾಹಿತಿ ನೀಡಿದರು.</p>.<p>ಹರಾಜು ಪಡೆದವರು ಆಂಧ್ರದಿಂದ ಮೇವು ಸರಬರಾಜು ಮಾಡುತ್ತಿದ್ದಾರೆ. ಶುಕ್ರವಾರ ಭತ್ತದ ಮೇವು ವಿತರಿಸಲಾಗಿದೆ. ಶನಿವಾರ ಮೆಕ್ಕೆ ಜೋಳದ ಮೇವು ವಿತರಿಸಲಾಗಿದೆ. ತೀವ್ರ ಬರ ಇರುವುದರಿಂದ ಜಾನುವಾರುಗಳಿಗೆ ಮೇವು ನೀಡಲಾಗದೆ ಪರದಾಡುತ್ತಿದ್ದ ನಾಗಲಮಡಿಕೆ ಹೋಬಳಿ ರೈತರು ಸಂತಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಇತರೆ ಮೂರು ಹೋಬಳಿಗಳಲ್ಲೂ ಶೀಘ್ರ ಮೇವು ಬ್ಯಾಂಕ್ ಆರಂಭಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>