<p>ತುಮಕೂರು: ನಗರದ ಸಾರ್ವಜನಿಕರು ಇನ್ನು ಮುಂದೆ ಆಟೊ ಸೇವೆಯನ್ನು ಆ್ಯಪ್ ಮೂಲಕ ಬುಕ್ ಮಾಡಿ ಬಳಕೆ ಮಾಡಿಕೊಳ್ಳಬಹುದಾಗಿದೆ. ‘ನಮ್ಮ ಯಾತ್ರಿ’ ಅಪ್ಲಿಕೇಶನ್ ಮೂಲಕ ಸೌಲಭ್ಯ ಲಭ್ಯವಾಗಲಿದೆ.</p>.<p>ನಗರದ ಯಲ್ಲಮ್ಮ ಪುಟ್ಟಪ್ಪ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದ ಅವರಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ‘ನಮ್ಮ ಯಾತ್ರಿ’ ಆ್ಯಪ್ಗೆ ಚಾಲನೆ ನೀಡಲಾಯಿತು.</p>.<p>ನಮ್ಮ ಯಾತ್ರಿ ಸಮುದಾಯದ ನಿರ್ದೇಶಕ ರಾಜೀವ್, ‘ಈಗಾಗಲೇ ಬೆಂಗಳೂರಿನಲ್ಲಿ ಈ ಸೇವೆ ಆರಂಭಿಸಿದ್ದು, ಆಟೊ ಚಾಲಕರು ಹಾಗೂ ಪ್ರಯಾಣಿಕರಿಗೆ ಸಹಕಾರಿಯಾಗಿದೆ. ನಗರಕ್ಕೂ ಈ ಸೇವೆ ವಿಸ್ತರಿಸಿದ್ದು, ಸಾಕಷ್ಟು ಜನರಿಗೆ ಸಹಕಾರಿಯಾಗಲಿದೆ. ಆಟೊ ಚಾಲಕರು ಮತ್ತು ಗ್ರಾಹಕರ ನಡುವೆ ಸಾಮರಸ್ಯ ಬೆಸೆಯುವಲ್ಲಿ ಈ ಆ್ಯಪ್ ನೆರವಾಗಲಿದೆ’ ಎಂದು ಹೇಳಿದರು.</p>.<p>ನಮ್ಮ ಯಾತ್ರಿ ಮುಖ್ಯಸ್ಥ ಶ್ಯಾನ್, ‘ತುಮಕೂರಿನಲ್ಲಿ ಆಟೊ ಪ್ರಯಾಣವನ್ನು ಆಧುನೀಕರಿಸಲು, ಜನರ ಬೇಡಿಕೆಗೆ ಅನುಗುಣವಾಗಿ ನಿಗದಿತ ಪ್ರಯಾಣ ದರದೊಂದಿಗೆ ಸೇವೆ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಆಟೊ ಚಾಲಕರ ಸಂಘದ ಮುಖಂಡ ನವೀನ್ ಕುಮಾರ್, ‘ನಗರದಲ್ಲೂ ಇಂತಹ ಸೇವೆಗೆ ಸಾಕಷ್ಟು ಬೇಡಿಕೆ ಇತ್ತು. ಆ್ಯಪ್ ಬಳಸುವುದರ ಮೂಲಕ ಜನರು ತಾವಿದ್ದಲ್ಲೇ ಆಟೊ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ’ ಎಂದರು.</p>.<p>ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಬಿ.ಎಚ್.ರಾಜೇಶ್, ನಗರ ಪಾಲಿಕೆ ಮಾಜಿ ಸದಸ್ಯ ಕೆ.ಪಿ.ಮಹೇಶ್, ಮುಖಂಡರಾದ ಎಂ.ಎಸ್.ಚಂದ್ರಶೇಖರ್, ಚಾಂದ್ ಪಾಷ, ನುಸ್ರತ್ ಉಲ್ಲಾ ಖಾನ್ ಷರೀಫ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರದ ಸಾರ್ವಜನಿಕರು ಇನ್ನು ಮುಂದೆ ಆಟೊ ಸೇವೆಯನ್ನು ಆ್ಯಪ್ ಮೂಲಕ ಬುಕ್ ಮಾಡಿ ಬಳಕೆ ಮಾಡಿಕೊಳ್ಳಬಹುದಾಗಿದೆ. ‘ನಮ್ಮ ಯಾತ್ರಿ’ ಅಪ್ಲಿಕೇಶನ್ ಮೂಲಕ ಸೌಲಭ್ಯ ಲಭ್ಯವಾಗಲಿದೆ.</p>.<p>ನಗರದ ಯಲ್ಲಮ್ಮ ಪುಟ್ಟಪ್ಪ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದ ಅವರಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ‘ನಮ್ಮ ಯಾತ್ರಿ’ ಆ್ಯಪ್ಗೆ ಚಾಲನೆ ನೀಡಲಾಯಿತು.</p>.<p>ನಮ್ಮ ಯಾತ್ರಿ ಸಮುದಾಯದ ನಿರ್ದೇಶಕ ರಾಜೀವ್, ‘ಈಗಾಗಲೇ ಬೆಂಗಳೂರಿನಲ್ಲಿ ಈ ಸೇವೆ ಆರಂಭಿಸಿದ್ದು, ಆಟೊ ಚಾಲಕರು ಹಾಗೂ ಪ್ರಯಾಣಿಕರಿಗೆ ಸಹಕಾರಿಯಾಗಿದೆ. ನಗರಕ್ಕೂ ಈ ಸೇವೆ ವಿಸ್ತರಿಸಿದ್ದು, ಸಾಕಷ್ಟು ಜನರಿಗೆ ಸಹಕಾರಿಯಾಗಲಿದೆ. ಆಟೊ ಚಾಲಕರು ಮತ್ತು ಗ್ರಾಹಕರ ನಡುವೆ ಸಾಮರಸ್ಯ ಬೆಸೆಯುವಲ್ಲಿ ಈ ಆ್ಯಪ್ ನೆರವಾಗಲಿದೆ’ ಎಂದು ಹೇಳಿದರು.</p>.<p>ನಮ್ಮ ಯಾತ್ರಿ ಮುಖ್ಯಸ್ಥ ಶ್ಯಾನ್, ‘ತುಮಕೂರಿನಲ್ಲಿ ಆಟೊ ಪ್ರಯಾಣವನ್ನು ಆಧುನೀಕರಿಸಲು, ಜನರ ಬೇಡಿಕೆಗೆ ಅನುಗುಣವಾಗಿ ನಿಗದಿತ ಪ್ರಯಾಣ ದರದೊಂದಿಗೆ ಸೇವೆ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>ಆಟೊ ಚಾಲಕರ ಸಂಘದ ಮುಖಂಡ ನವೀನ್ ಕುಮಾರ್, ‘ನಗರದಲ್ಲೂ ಇಂತಹ ಸೇವೆಗೆ ಸಾಕಷ್ಟು ಬೇಡಿಕೆ ಇತ್ತು. ಆ್ಯಪ್ ಬಳಸುವುದರ ಮೂಲಕ ಜನರು ತಾವಿದ್ದಲ್ಲೇ ಆಟೊ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ’ ಎಂದರು.</p>.<p>ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಬಿ.ಎಚ್.ರಾಜೇಶ್, ನಗರ ಪಾಲಿಕೆ ಮಾಜಿ ಸದಸ್ಯ ಕೆ.ಪಿ.ಮಹೇಶ್, ಮುಖಂಡರಾದ ಎಂ.ಎಸ್.ಚಂದ್ರಶೇಖರ್, ಚಾಂದ್ ಪಾಷ, ನುಸ್ರತ್ ಉಲ್ಲಾ ಖಾನ್ ಷರೀಫ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>