<p><strong>ಬಾಗೂರು (ನುಗ್ಗೇಹಳ್ಳಿ):</strong> ಯೂರಿಯಾ ಹಾಗೂ ರಸಗೊಬ್ಬರದ ಬೆಲೆಯ ಹೆಚ್ಚಳ ಹಾಗೂ ದಾಸ್ತಾನು ಕೊರತೆ ನೀಗಿಸುವ ಸಲುವಾಗಿ ರೈತರು ಕೃಷಿ ಚಟುವಟಿಕೆಗೆ ನ್ಯಾನೊ ಯೂರಿಯಾ ಬಳಸುವಂತೆ ಹೋಬಳಿ ಕೃಷಿ ಅಧಿಕಾರಿ ಎಚ್.ಎಸ್ ರಕ್ಷಿತ್ ತಿಳಿಸಿದರು.</p>.<p>ಹೋಬಳಿಯ ಭಕ್ತರಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಎಫ್ಎನ್ಎಸ್ ಯೋಜನೆ ಯಡಿ ಅಲಸಂದೆ ರಾಗಿ ಗೊಬ್ಬರ ಇತರೆ ಪರಿಕರಗಳ ವಿತರಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಹಿನ್ನೆಲೆಯಲ್ಲಿ ಯೂರಿಯಾ ಹಾಗೂ ರಸಗೊಬ್ಬರದ ಕೊರತೆಯನ್ನು ತಪ್ಪಿಸಲು ರೈತರು ಸಾವಯವ ಕೃಷಿ ಹಾಗೂ ನ್ಯಾನೊ ಯೂರಿಯಾ ಬಳಕೆ ಮಾಡುವ ಮೂಲಕ ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಚಟುವಟಿಕೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.</p>.<p>ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ ಹಾಗೂ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರಾದ ಮೋಹನ್ ಅವರ ಸಲಹೆಯಂತೆ ಭಕ್ತರಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು 100 ಹೆಕ್ಟೇರ್ ಪ್ರದೇಶದ ಬಿತ್ತನೆಗಾಗಿ ಪ್ರಸ್ತುತ ಸಾಲಿನಲ್ಲಿ ಗ್ರಾಮದ 100 ರೈತರಿಗೆ ₹2500 ಬೆಲೆಯ ಬೀಜ– ಗೊಬ್ಬರ ಉಚಿತವಾಗಿ ನೀಡಲಾಗುತ್ತಿದ್ದು, ಜೊತೆಗೆ ಸಹಾಯಧನದ ಹಣವನ್ನು ರೈತರ ಖಾತೆಗೆ ನೇರವಾಗಿ ಹಾಕಲಾಗುತ್ತದೆ ಎಂದರು.</p>.<p>ಸದ್ಯಪೂರ್ವ ಮುಂಗಾರಿಗೆ ರೈತರಿಗೆ ಬಿತ್ತನೆಗೆ ಹೆಸರು ಕಾಳು ಅಲಸಂದೆ ಜೋಳ ಸೇರಿದಂತೆ ಇತರೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಕೊಡಲಾಗುತ್ತಿದೆ. ರೈತರು ತಪ್ಪದೆ ಕೃಷಿ ಇಲಾಖೆಗೆ ಭೇಟಿ ನೀಡಿ ಪಡೆದುಕೊಳ್ಳುವಂತೆ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಂಜುಂಡಪ್ಪ, ಕೃಷಿ ಪತ್ತಿನ ನಿರ್ದೇಶಕ ಬಿಎನ್ ಮಾಲಿಂಗಪ್ಪ, ಕೃಷಿ ಇಲಾಖೆಯ ಸಿಬ್ಬಂದಿ ಬಸವರಾಜು, ವೀಣಾ, ಕೃಷಿ ಸುಖಿಯರು ಮತ್ತು ರೈತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-36-2112278751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೂರು (ನುಗ್ಗೇಹಳ್ಳಿ):</strong> ಯೂರಿಯಾ ಹಾಗೂ ರಸಗೊಬ್ಬರದ ಬೆಲೆಯ ಹೆಚ್ಚಳ ಹಾಗೂ ದಾಸ್ತಾನು ಕೊರತೆ ನೀಗಿಸುವ ಸಲುವಾಗಿ ರೈತರು ಕೃಷಿ ಚಟುವಟಿಕೆಗೆ ನ್ಯಾನೊ ಯೂರಿಯಾ ಬಳಸುವಂತೆ ಹೋಬಳಿ ಕೃಷಿ ಅಧಿಕಾರಿ ಎಚ್.ಎಸ್ ರಕ್ಷಿತ್ ತಿಳಿಸಿದರು.</p>.<p>ಹೋಬಳಿಯ ಭಕ್ತರಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಎಫ್ಎನ್ಎಸ್ ಯೋಜನೆ ಯಡಿ ಅಲಸಂದೆ ರಾಗಿ ಗೊಬ್ಬರ ಇತರೆ ಪರಿಕರಗಳ ವಿತರಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಹಿನ್ನೆಲೆಯಲ್ಲಿ ಯೂರಿಯಾ ಹಾಗೂ ರಸಗೊಬ್ಬರದ ಕೊರತೆಯನ್ನು ತಪ್ಪಿಸಲು ರೈತರು ಸಾವಯವ ಕೃಷಿ ಹಾಗೂ ನ್ಯಾನೊ ಯೂರಿಯಾ ಬಳಕೆ ಮಾಡುವ ಮೂಲಕ ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಚಟುವಟಿಕೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.</p>.<p>ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ ಹಾಗೂ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರಾದ ಮೋಹನ್ ಅವರ ಸಲಹೆಯಂತೆ ಭಕ್ತರಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು 100 ಹೆಕ್ಟೇರ್ ಪ್ರದೇಶದ ಬಿತ್ತನೆಗಾಗಿ ಪ್ರಸ್ತುತ ಸಾಲಿನಲ್ಲಿ ಗ್ರಾಮದ 100 ರೈತರಿಗೆ ₹2500 ಬೆಲೆಯ ಬೀಜ– ಗೊಬ್ಬರ ಉಚಿತವಾಗಿ ನೀಡಲಾಗುತ್ತಿದ್ದು, ಜೊತೆಗೆ ಸಹಾಯಧನದ ಹಣವನ್ನು ರೈತರ ಖಾತೆಗೆ ನೇರವಾಗಿ ಹಾಕಲಾಗುತ್ತದೆ ಎಂದರು.</p>.<p>ಸದ್ಯಪೂರ್ವ ಮುಂಗಾರಿಗೆ ರೈತರಿಗೆ ಬಿತ್ತನೆಗೆ ಹೆಸರು ಕಾಳು ಅಲಸಂದೆ ಜೋಳ ಸೇರಿದಂತೆ ಇತರೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಕೊಡಲಾಗುತ್ತಿದೆ. ರೈತರು ತಪ್ಪದೆ ಕೃಷಿ ಇಲಾಖೆಗೆ ಭೇಟಿ ನೀಡಿ ಪಡೆದುಕೊಳ್ಳುವಂತೆ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಂಜುಂಡಪ್ಪ, ಕೃಷಿ ಪತ್ತಿನ ನಿರ್ದೇಶಕ ಬಿಎನ್ ಮಾಲಿಂಗಪ್ಪ, ಕೃಷಿ ಇಲಾಖೆಯ ಸಿಬ್ಬಂದಿ ಬಸವರಾಜು, ವೀಣಾ, ಕೃಷಿ ಸುಖಿಯರು ಮತ್ತು ರೈತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-36-2112278751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>