ರೈತ ಮೋರ್ಚಾದಿಂದ ಮೋದಿಗೆ ಆಭಿನಂದನೆ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಧ್ಯಂತರ ಬಜೆಟ್ನಲ್ಲಿ ಜಾರಿಗೊಳಿಸಿರುವ ಪ್ರಧಾನಿ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 12 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶಿವಪ್ರಸಾದ್ ನುಡಿದರು.
ನಗರದ ಶೆಟ್ಟಿಹಳ್ಳಿಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಈ ಯೋಜನೆಯಡಿ ₹ 6 ಸಾವಿರವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.
ಮಾಜಿ ಸಂಸದ ಜಿ.ಎಸ್.ಬಸವರಾಜ್, ‘ಆಯುಷ್ಮಾನ್ ಭಾರತ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಜಾರಿಗೆ ತರುವ ಮೂಲಕ ಕೋಟ್ಯಂತರ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಯನ್ನು ಪ್ರಧಾನ ಮಂತ್ರಿ ಕಾಪಾಡುತ್ತಿದ್ದಾರೆ’ ಎಂದರು.
ಮುಖಂಡ ಡಾ.ಹುಲಿನಾಯ್ಕರ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸ್ನೇಕ್ ನಂದೀಶ್, ಪ್ರಧಾನ ಕಾರ್ಯದರ್ಶಿ ಮಹೇಶ್, ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವೀಶ್ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.