ಬೆಂಗಳೂರು: ಪ್ರಧಾನಿನರೇಂದ್ರ ಮೋದಿ ಜನವರಿ 2 ರಂದು ತುಮಕೂರಿನಲ್ಲಿ ರೈತರ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಆ ಬಳಿಕ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಜನವರಿ 3 ರಂದು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸುವರು. ನಂತರ ಜಿಗಣಿಯಲ್ಲಿರುವ ಯೋಗ ವಿಶ್ವವಿದ್ಯಾಲಯದ ಕಾರ್ಯದಲ್ಲಿ ಭಾಗವಹಿಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.