ರಾಗಿ, ಒಣ ಭತ್ತ, ತೊಗರಿ ಹೀಗೆ ಕಡಿಮೆ ನೀರು ಬಳಸಿ ಬೆಳೆಯುವ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ. ಬೆಟ್ಟದ ನೆಲ್ಲಿ, ಗೋಡಂಬಿ, ಹುಣಸೆ, ಮಾವು, ಹೆಬ್ಬೇವು ಸೇರಿದಂತೆ ಅರಣ್ಯ ಮರಗಳನ್ನು ಬೆಳೆಸಲಾಗಿದೆ. ನೀರಿನ ಮೂಲ ಹೆಚ್ಚಿರುವ ಕಾರಣ ಪ್ರಾಣಿ, ಪಕ್ಷಿ, ಜನುವಾರುಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಮಣ್ಣಿನ ಸವಕಳಿ ಹಾಗೂ ಮಳೆ ನೀರು ಇಂಗಿಸುವ ಸಲುವಾಗಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಬದುಗಳನ್ನು ಹಾಕಲಾಗಿದೆ.