ನೋಟಿಸ್ ಜಾರಿ: ಘಟನೆಯ ಕುರಿತು ಸಮಜಾಯಿಷಿ ನೀಡುವಂತೆ ಗ್ರಾ.ಪಂ ನೀರುಗಂಟಿ ನವೀನ್ಕುಮಾರ್ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ತಿಳಿಸದೆ ಇದ್ದರೂ ನೀರುಗಂಟಿ ನವೀನ್ಕುಮಾರ್ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು, ಉದ್ದೇಶ ಪೂರ್ವಕವಾಗಿ ಈ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ನವೀನ್ಕುಮಾರ್ ಸರ್ಕಾರಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ್ದು, ಈ ಕುರಿತು ಒಂದು ದಿನದ ಒಳಗೆ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.