ತುಮಕೂರು: ಕೃಷಿ ಕಾಯ್ದೆ ರದ್ದು ಮಾಡಿದ್ದು, ಅದೇ ರೀತಿ ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ ನಗರದ ಹೊರ ವಲಯದ ಜಾಸ್ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದು ಮಾಡುವ ನಿರ್ಧಾರ ಕೈಗೊಂಡಿದ್ದು, ಅದೇ ರೀತಿ ರಾಜ್ಯದಲ್ಲೂ ಎರಡೂ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.