<p><strong>ಚಿಕ್ಕನಾಯಕನಹಳ್ಳಿ:</strong> ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನೂ ಸಮಾಜದ ಏಳಿಗೆಗಾಗಿ ಮತ ಚಲಾಯಿಸಬೇಕು ಎಂದು ನ್ಯಾಯಾಧೀಶ ಸತೀಶ್ ಎಸ್.ಟಿ ಸಲಹೆ ನೀಡಿದರು.</p>.<p>ಪಟ್ಟಣದ ನವೋದಯ ಕಾಲೇಜಿನಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಆಡಳಿತ ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಮಾತನಾಡಿದರು.</p>.<p>ಅಬ್ರಹಾಂ ಲಿಂಕನ್ ಹೇಳಿದಂತೆ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಈ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮತದಾನವೇ ಪ್ರಮುಖ ಅಸ್ತ್ರ. ಚುನಾವಣೆ ಬಂದಾಗ ಪ್ರವಾಸ ಹೋಗುವುದನ್ನು ಬಿಟ್ಟು, ದೇಶದ ಹಿತದೃಷ್ಟಿಯಿಂದ ಯಾರ ದಾಕ್ಷಿಣ್ಯಕ್ಕೂ ಒಳಗಾಗದೆ ಆತ್ಮಸಾಕ್ಷಿಗೆ ಒಪ್ಪುವ ಸಾರ್ವಜನಿಕ ಕಳಕಳಿಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.</p>.<p>ತಹಶೀಲ್ದಾರ್ ಮಮತಾ ಮಾತನಾಡಿ, ದೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಯುವಕರೇ ನಾಡಿನ ಆಸ್ತಿ. ಪ್ರಸ್ತುತ ಶೇ. 25ರಷ್ಟು ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ತೋರಿಸುತ್ತಿರುವುದು ವಿಷಾದನೀಯ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಜ್ಞಾನಮೂರ್ತಿ ಮಾತನಾಡಿ, ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಾಟ ಮಾಡದೆ, ಅದರ ಪಾವಿತ್ರ್ಯ ಕಾಪಾಡಿಕೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್., ವಕೀಲ ಸಂದೀಪ್ ಸಿ.ಎಲ್., ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಬಸವರಾಜು ಮಾತನಾಡಿದರು.</p>.<p>ವಕೀಲ ಪ್ರಶಾಂತ್, ನವೋದಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರವಿಕುಮಾರ್ ಸಿ. ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರನೂ ಸಮಾಜದ ಏಳಿಗೆಗಾಗಿ ಮತ ಚಲಾಯಿಸಬೇಕು ಎಂದು ನ್ಯಾಯಾಧೀಶ ಸತೀಶ್ ಎಸ್.ಟಿ ಸಲಹೆ ನೀಡಿದರು.</p>.<p>ಪಟ್ಟಣದ ನವೋದಯ ಕಾಲೇಜಿನಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಆಡಳಿತ ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಮಾತನಾಡಿದರು.</p>.<p>ಅಬ್ರಹಾಂ ಲಿಂಕನ್ ಹೇಳಿದಂತೆ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಈ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮತದಾನವೇ ಪ್ರಮುಖ ಅಸ್ತ್ರ. ಚುನಾವಣೆ ಬಂದಾಗ ಪ್ರವಾಸ ಹೋಗುವುದನ್ನು ಬಿಟ್ಟು, ದೇಶದ ಹಿತದೃಷ್ಟಿಯಿಂದ ಯಾರ ದಾಕ್ಷಿಣ್ಯಕ್ಕೂ ಒಳಗಾಗದೆ ಆತ್ಮಸಾಕ್ಷಿಗೆ ಒಪ್ಪುವ ಸಾರ್ವಜನಿಕ ಕಳಕಳಿಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.</p>.<p>ತಹಶೀಲ್ದಾರ್ ಮಮತಾ ಮಾತನಾಡಿ, ದೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಯುವಕರೇ ನಾಡಿನ ಆಸ್ತಿ. ಪ್ರಸ್ತುತ ಶೇ. 25ರಷ್ಟು ಮತದಾರರು ಮತದಾನದ ಬಗ್ಗೆ ನಿರಾಸಕ್ತಿ ತೋರಿಸುತ್ತಿರುವುದು ವಿಷಾದನೀಯ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಜ್ಞಾನಮೂರ್ತಿ ಮಾತನಾಡಿ, ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಾಟ ಮಾಡದೆ, ಅದರ ಪಾವಿತ್ರ್ಯ ಕಾಪಾಡಿಕೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್., ವಕೀಲ ಸಂದೀಪ್ ಸಿ.ಎಲ್., ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಬಸವರಾಜು ಮಾತನಾಡಿದರು.</p>.<p>ವಕೀಲ ಪ್ರಶಾಂತ್, ನವೋದಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರವಿಕುಮಾರ್ ಸಿ. ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>