<p><strong>ತುಮಕೂರು:</strong> ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಝಲಕ್ ಇತ್ತು. ಯೋಗ ಪ್ರದರ್ಶನ, ಮೂಕಾಭಿನಯ, ಕವಿತೆ ವಾಚನಗಳೂ ಇದ್ದವು. ಸ್ಪರ್ಧೆಗಳಲ್ಲಿ ವಿಜೇತರಾದ ಕ್ಯಾಡೆಟ್ಗಳಿಗೆ ಬಹುಮಾನಗಳನ್ನು ಪ್ರದಾನ ಮಾಡಲಾಯಿತು.</p>.<p>ತುಮಕೂರಿನ 4ನೇ ಕರ್ನಾಟಕ ಬೆಟಾಲಿಯನ್ ಮತ್ತು ಎನ್.ಸಿ.ಸಿ. ಬೆಂಗಳೂರು ಗ್ರೂಪ್ ‘ಎ’ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತರ್ ಗ್ರೂಪ್ ಬಾಲಕಿಯರ ಥಲ್ ಸೈನಿಕ್ ಶಿಬಿರ’ದಲ್ಲಿ ಕಂಡ ನೋಟಗಳಿವು.</p>.<p>ರಾಜ್ಯದ ಆರು ಗ್ರೂಪ್ಗಳಿಂದ ಆಯ್ಕೆಯಾಗಿ ಬಂದಿದ್ದ 240 ಶಿಬಿರಾರ್ಥಿಗಳು ಸವಿ ನೆನಪುಗಳ ಬುತ್ತಿಯನ್ನು ಕಟ್ಟಿಕೊಂಡರು.</p>.<p>ಶಿಬಿರದಲ್ಲಿ ನಡೆದ ಸೈನಿಕ ತರಬೇತಿ ಸ್ಪರ್ಧೆಗಳಲ್ಲಿ ವಿಜೇತರಾದ ಕೆಡೆಟ್ಗಳಿಗೆ ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್ ಜನರಲ್ ಏರ್ ಕಮಾಂಡರ್ ಲಲಿತ್ ಕುಮಾರ್ ಜೈನ್ ಅವರು ಪದಕಗಳನ್ನು ಪ್ರದಾನ ಮಾಡಿದರು.</p>.<p>ಲಲಿತ್ ಕುಮಾರ್ ಜೈನ್ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕ ನೆಲೆಯಲ್ಲಿ ಹಲವಾರು ಶಕ್ತಿಗಳು ಸಮಾಜವನ್ನು ವಿಭಜನೆ ಮಾಡುತ್ತಿವೆ. ಇಂತಹ ಸ್ಥಿತಿಯಲ್ಲಿ ಬದಲಾವಣೆ ಎಂಬುದು ನಮ್ಮಿಂದ, ನೆರೆಹೊರೆಯಿಂದ ಆಗಬೇಕು. ಒಬ್ಬರಿಗೊಬ್ಬರು ಕೈ ಜೋಡಿಸಿ ಕೆಲಸ ಮಾಡಿದಾಗ ಸುಧಾರಣೆ ಸಾಧ್ಯವಾಗುತ್ತದೆ ಎಂದರು.</p>.<p>ಶಿಬಿರದಲ್ಲಿನ ಸ್ಪರ್ಧೆಗಳಲ್ಲಿನ ಬಹುಮಾನಗಳಿಗಿಂತ ಅನುಭವ ದೊಡ್ಡದು. ಅದುವೇ ನಿಮ್ಮನ್ನು ಸವಾಲುಗಳನ್ನು ಎದುರಿಸಲು ಸ್ಥೈರ್ಯ ತುಂಬುತ್ತದೆ. ನೀವು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ನಮ್ಮದು ಯುವಜನರು ಹೆಚ್ಚು ಇರುವ ದೇಶ. ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸಂಸ್ಥೆಗಳು ಯುವ ಸಮೂಹದಲ್ಲಿ ದೇಶಾಭಿಮಾನ ಮೂಡಿಸಲು ನೆರವಾಗುತ್ತವೆ. ಎನ್.ಸಿ.ಸಿ. ಅನ್ನು ಪ್ರೌಢಶಾಲಾ ಮಟ್ಟದಲ್ಲಿ ಕಡ್ಡಾಯ ಮಾಡಿದರೆ ಇನ್ನು ಉತ್ತಮ ಎಂದು ಅಭಿಪ್ರಾಯಪಟ್ಟರು.</p>.<p>ಶಿಬಿರದ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಬೆಂಗಳೂರು ‘ಎ’ ತಂಡ ಪ್ರಥಮ ಬಹುಮಾನವನ್ನು ಹಾಗೂ ಮಂಗಳೂರು ತಂಡವು ದ್ವಿತೀಯ ಸ್ಥಾನದ ಬಹುಮಾನವನ್ನು ಗಳಿಸಿತು.</p>.<p>ಕಾರ್ಯಕ್ರಮದಲ್ಲಿ ಚೀಫ್ ಟ್ರೈನಿಂಗ್ ಆಫಿಸರ್ ಕರ್ನಲ್ ರಾಜೇಶ್ ವರ್ಮಾ, ಕ್ಯಾಂಪ್ ಕಮಾಡೆಂಟ್ ಕರ್ನಲ್ ಶೈಲೇಶ್ ಶರ್ಮಾ ಇದ್ದರು. ಬೆಂಗಳೂರು, ಮೈಸೂರು, ಬಳ್ಳಾರಿ, ಬೆಳಗಾವಿ, ಮಂಗಳೂರು ಎನ್.ಸಿ.ಸಿ. ತಂಡಗಳು ಶಿಬಿರದಲ್ಲಿ ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಝಲಕ್ ಇತ್ತು. ಯೋಗ ಪ್ರದರ್ಶನ, ಮೂಕಾಭಿನಯ, ಕವಿತೆ ವಾಚನಗಳೂ ಇದ್ದವು. ಸ್ಪರ್ಧೆಗಳಲ್ಲಿ ವಿಜೇತರಾದ ಕ್ಯಾಡೆಟ್ಗಳಿಗೆ ಬಹುಮಾನಗಳನ್ನು ಪ್ರದಾನ ಮಾಡಲಾಯಿತು.</p>.<p>ತುಮಕೂರಿನ 4ನೇ ಕರ್ನಾಟಕ ಬೆಟಾಲಿಯನ್ ಮತ್ತು ಎನ್.ಸಿ.ಸಿ. ಬೆಂಗಳೂರು ಗ್ರೂಪ್ ‘ಎ’ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತರ್ ಗ್ರೂಪ್ ಬಾಲಕಿಯರ ಥಲ್ ಸೈನಿಕ್ ಶಿಬಿರ’ದಲ್ಲಿ ಕಂಡ ನೋಟಗಳಿವು.</p>.<p>ರಾಜ್ಯದ ಆರು ಗ್ರೂಪ್ಗಳಿಂದ ಆಯ್ಕೆಯಾಗಿ ಬಂದಿದ್ದ 240 ಶಿಬಿರಾರ್ಥಿಗಳು ಸವಿ ನೆನಪುಗಳ ಬುತ್ತಿಯನ್ನು ಕಟ್ಟಿಕೊಂಡರು.</p>.<p>ಶಿಬಿರದಲ್ಲಿ ನಡೆದ ಸೈನಿಕ ತರಬೇತಿ ಸ್ಪರ್ಧೆಗಳಲ್ಲಿ ವಿಜೇತರಾದ ಕೆಡೆಟ್ಗಳಿಗೆ ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್ ಜನರಲ್ ಏರ್ ಕಮಾಂಡರ್ ಲಲಿತ್ ಕುಮಾರ್ ಜೈನ್ ಅವರು ಪದಕಗಳನ್ನು ಪ್ರದಾನ ಮಾಡಿದರು.</p>.<p>ಲಲಿತ್ ಕುಮಾರ್ ಜೈನ್ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕ ನೆಲೆಯಲ್ಲಿ ಹಲವಾರು ಶಕ್ತಿಗಳು ಸಮಾಜವನ್ನು ವಿಭಜನೆ ಮಾಡುತ್ತಿವೆ. ಇಂತಹ ಸ್ಥಿತಿಯಲ್ಲಿ ಬದಲಾವಣೆ ಎಂಬುದು ನಮ್ಮಿಂದ, ನೆರೆಹೊರೆಯಿಂದ ಆಗಬೇಕು. ಒಬ್ಬರಿಗೊಬ್ಬರು ಕೈ ಜೋಡಿಸಿ ಕೆಲಸ ಮಾಡಿದಾಗ ಸುಧಾರಣೆ ಸಾಧ್ಯವಾಗುತ್ತದೆ ಎಂದರು.</p>.<p>ಶಿಬಿರದಲ್ಲಿನ ಸ್ಪರ್ಧೆಗಳಲ್ಲಿನ ಬಹುಮಾನಗಳಿಗಿಂತ ಅನುಭವ ದೊಡ್ಡದು. ಅದುವೇ ನಿಮ್ಮನ್ನು ಸವಾಲುಗಳನ್ನು ಎದುರಿಸಲು ಸ್ಥೈರ್ಯ ತುಂಬುತ್ತದೆ. ನೀವು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ನಮ್ಮದು ಯುವಜನರು ಹೆಚ್ಚು ಇರುವ ದೇಶ. ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸಂಸ್ಥೆಗಳು ಯುವ ಸಮೂಹದಲ್ಲಿ ದೇಶಾಭಿಮಾನ ಮೂಡಿಸಲು ನೆರವಾಗುತ್ತವೆ. ಎನ್.ಸಿ.ಸಿ. ಅನ್ನು ಪ್ರೌಢಶಾಲಾ ಮಟ್ಟದಲ್ಲಿ ಕಡ್ಡಾಯ ಮಾಡಿದರೆ ಇನ್ನು ಉತ್ತಮ ಎಂದು ಅಭಿಪ್ರಾಯಪಟ್ಟರು.</p>.<p>ಶಿಬಿರದ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಬೆಂಗಳೂರು ‘ಎ’ ತಂಡ ಪ್ರಥಮ ಬಹುಮಾನವನ್ನು ಹಾಗೂ ಮಂಗಳೂರು ತಂಡವು ದ್ವಿತೀಯ ಸ್ಥಾನದ ಬಹುಮಾನವನ್ನು ಗಳಿಸಿತು.</p>.<p>ಕಾರ್ಯಕ್ರಮದಲ್ಲಿ ಚೀಫ್ ಟ್ರೈನಿಂಗ್ ಆಫಿಸರ್ ಕರ್ನಲ್ ರಾಜೇಶ್ ವರ್ಮಾ, ಕ್ಯಾಂಪ್ ಕಮಾಡೆಂಟ್ ಕರ್ನಲ್ ಶೈಲೇಶ್ ಶರ್ಮಾ ಇದ್ದರು. ಬೆಂಗಳೂರು, ಮೈಸೂರು, ಬಳ್ಳಾರಿ, ಬೆಳಗಾವಿ, ಮಂಗಳೂರು ಎನ್.ಸಿ.ಸಿ. ತಂಡಗಳು ಶಿಬಿರದಲ್ಲಿ ಭಾಗವಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>