<p><strong>ತುಮಕೂರು</strong>: ಭಾರತದಲ್ಲಿ ಯುವಕರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಜಗತ್ತಿನ ಇತರೆ ಯಾವುದೇ ರಾಷ್ಟ್ರದಲ್ಲೂ ಇಷ್ಟೊಂದು ಸಂಖ್ಯೆಯ ಯುವ ಸಮೂಹ ಇಲ್ಲವಾಗಿದೆ. ಈ ಮಾನವ ಸಂಪತ್ತನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕಿದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದರು.</p>.<p>ತಾಲ್ಲೂಕಿನ ಕೆ.ಪಾಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತಗಾನಹಳ್ಳಿಯಲ್ಲಿ ಗುರುವಾರ ನಡೆದ ಶನೇಶ್ವರಸ್ವಾಮಿ, ಮಹಾಗಣಪತಿ, ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಉದ್ಘಾಟನೆ, ಗೋಪುರ ಕಳಸ ಪ್ರತಿಷ್ಠಾಪನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ವಿಶ್ವದ ಇತರೆ ದೇಶಗಳಿಗಿಂತ ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ. ಯುವಜನರು ಹಿರಿಯರ ಮಾರ್ಗದರ್ಶನದಲ್ಲಿ ದೇಶದ ಅಭ್ಯುದಯಕ್ಕೆ ಸಂಕಲ್ಪ ಮಾಡಬೇಕು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ದೇಶ, ನಾಡು, ಸಮಾಜದ ರಕ್ಷಣೆ, ಬೆಳವಣಿಗೆಗೆ ಕೈ ಜೋಡಿಸಬೇಕು ಎಂದು ಹೇಳಿದರು.</p>.<p>25 ವರ್ಷಗಳ ಹಿಂದೆ ರಾಜ್ಯದಲ್ಲಿ ಸುಮಾರು 5 ಕೋಟಿ ಜನ ಸಂಖ್ಯೆ ಇದ್ದ ಸಮಯದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ 5 ಕೋಟಿ ವೃಕ್ಷ ಯೋಜನೆಯಡಿ ಗಿಡ ನೆಡುವ ಸಂಕಲ್ಪ ಮಾಡಿದ್ದರು. ಜೀವಸಂಕುಲ ಉಳಿಯಬೇಕಾದರೆ ಪರಿಸರ ಸಂರಕ್ಷಿಸಬೇಕಿದೆ. ಉಸಿರಾಡುವ ಆಮ್ಲಜನಕ ಗಿಡ, ಮರಗಳಿಂದಲೇ ಬರಬೇಕು. ಹಸಿರು ಸಂಪತ್ತು ಹೆಚ್ಚಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಾಸಕ ಬಿ.ಸುರೇಶ್ಗೌಡ, ‘ದೇವಸ್ಥಾನಗಳು ಆಯಾ ಗ್ರಾಮಗಳ ಭಕ್ತಿ ಕೇಂದ್ರಗಳಾಗಬೇಕು. ಊರಿನ ಎಲ್ಲರೂ ಪರಸ್ಪರ ಕಷ್ಟಸುಖಗಳಿಗೆ ಸ್ಪಂದಿಸುತ್ತಾ ಒಟ್ಟಾಗಿ ಬಾಳಬೇಕು. ದ್ವೇಷ, ಅಸೂಯೆ ಮರೆತರೆ ಶಾಂತಿ, ನೆಮ್ಮದಿಯಿಂದ ಬದುಕಬಹುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಚಂದ್ರಶೇಖರ್, ಸದಸ್ಯೆ ಜಯಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳೂರು ಶಿವಕುಮಾರ್, ಬಿಜೆಪಿ ಮುಖಂಡರಾದ ಶಂಕರಣ್ಣ, ಸುಮಿತ್ರಾದೇವಿ, ರೇಣುಕಮ್ಮ, ಮುಖಂಡರಾದ ಬಸವರಾಜು, ಯತೀಶ್, ಮಧುಸೂದನ್, ಜಯಣ್ಣ, ಪುಷ್ಪಲತಾ, ಗಿರೀಶ್, ಉಮಾದೇವಿ, ಲಕ್ಷ್ಮಿದೇವಮ್ಮ, ಮಂಜುಳಾ ಪಾಲ್ಗೊಂಡಿದ್ದರು.</p>.<p>ದೇವಸ್ಥಾನಕ್ಕೆ ಭೂಮಿ ದಾನ ಕೊಟ್ಟಿರುವ ಗಂಗಮ್ಮ, ಗಂಗನರಸಯ್ಯ, ಸಿದ್ಧಲಿಂಗಯ್ಯ, ಗೌರಮ್ಮ, ಚಿಕ್ಕರಂಗಯ್ಯ ಕುಟುಂಬದವರು, ದಾನಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಭಾರತದಲ್ಲಿ ಯುವಕರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಜಗತ್ತಿನ ಇತರೆ ಯಾವುದೇ ರಾಷ್ಟ್ರದಲ್ಲೂ ಇಷ್ಟೊಂದು ಸಂಖ್ಯೆಯ ಯುವ ಸಮೂಹ ಇಲ್ಲವಾಗಿದೆ. ಈ ಮಾನವ ಸಂಪತ್ತನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕಿದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದರು.</p>.<p>ತಾಲ್ಲೂಕಿನ ಕೆ.ಪಾಲಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತಗಾನಹಳ್ಳಿಯಲ್ಲಿ ಗುರುವಾರ ನಡೆದ ಶನೇಶ್ವರಸ್ವಾಮಿ, ಮಹಾಗಣಪತಿ, ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಉದ್ಘಾಟನೆ, ಗೋಪುರ ಕಳಸ ಪ್ರತಿಷ್ಠಾಪನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ವಿಶ್ವದ ಇತರೆ ದೇಶಗಳಿಗಿಂತ ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ. ಯುವಜನರು ಹಿರಿಯರ ಮಾರ್ಗದರ್ಶನದಲ್ಲಿ ದೇಶದ ಅಭ್ಯುದಯಕ್ಕೆ ಸಂಕಲ್ಪ ಮಾಡಬೇಕು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ದೇಶ, ನಾಡು, ಸಮಾಜದ ರಕ್ಷಣೆ, ಬೆಳವಣಿಗೆಗೆ ಕೈ ಜೋಡಿಸಬೇಕು ಎಂದು ಹೇಳಿದರು.</p>.<p>25 ವರ್ಷಗಳ ಹಿಂದೆ ರಾಜ್ಯದಲ್ಲಿ ಸುಮಾರು 5 ಕೋಟಿ ಜನ ಸಂಖ್ಯೆ ಇದ್ದ ಸಮಯದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ 5 ಕೋಟಿ ವೃಕ್ಷ ಯೋಜನೆಯಡಿ ಗಿಡ ನೆಡುವ ಸಂಕಲ್ಪ ಮಾಡಿದ್ದರು. ಜೀವಸಂಕುಲ ಉಳಿಯಬೇಕಾದರೆ ಪರಿಸರ ಸಂರಕ್ಷಿಸಬೇಕಿದೆ. ಉಸಿರಾಡುವ ಆಮ್ಲಜನಕ ಗಿಡ, ಮರಗಳಿಂದಲೇ ಬರಬೇಕು. ಹಸಿರು ಸಂಪತ್ತು ಹೆಚ್ಚಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಾಸಕ ಬಿ.ಸುರೇಶ್ಗೌಡ, ‘ದೇವಸ್ಥಾನಗಳು ಆಯಾ ಗ್ರಾಮಗಳ ಭಕ್ತಿ ಕೇಂದ್ರಗಳಾಗಬೇಕು. ಊರಿನ ಎಲ್ಲರೂ ಪರಸ್ಪರ ಕಷ್ಟಸುಖಗಳಿಗೆ ಸ್ಪಂದಿಸುತ್ತಾ ಒಟ್ಟಾಗಿ ಬಾಳಬೇಕು. ದ್ವೇಷ, ಅಸೂಯೆ ಮರೆತರೆ ಶಾಂತಿ, ನೆಮ್ಮದಿಯಿಂದ ಬದುಕಬಹುದು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಚಂದ್ರಶೇಖರ್, ಸದಸ್ಯೆ ಜಯಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳೂರು ಶಿವಕುಮಾರ್, ಬಿಜೆಪಿ ಮುಖಂಡರಾದ ಶಂಕರಣ್ಣ, ಸುಮಿತ್ರಾದೇವಿ, ರೇಣುಕಮ್ಮ, ಮುಖಂಡರಾದ ಬಸವರಾಜು, ಯತೀಶ್, ಮಧುಸೂದನ್, ಜಯಣ್ಣ, ಪುಷ್ಪಲತಾ, ಗಿರೀಶ್, ಉಮಾದೇವಿ, ಲಕ್ಷ್ಮಿದೇವಮ್ಮ, ಮಂಜುಳಾ ಪಾಲ್ಗೊಂಡಿದ್ದರು.</p>.<p>ದೇವಸ್ಥಾನಕ್ಕೆ ಭೂಮಿ ದಾನ ಕೊಟ್ಟಿರುವ ಗಂಗಮ್ಮ, ಗಂಗನರಸಯ್ಯ, ಸಿದ್ಧಲಿಂಗಯ್ಯ, ಗೌರಮ್ಮ, ಚಿಕ್ಕರಂಗಯ್ಯ ಕುಟುಂಬದವರು, ದಾನಿಗಳನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>