ಚಿಕ್ಕನಾಯಕನಹಳ್ಳಿ: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಪ್ರತಿ ದಿನ ಮನೆ ಮನೆಗೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರು ಕೆಲ ಕಿಡಿಗೇಡಿಗಳ ಮತ್ತು ಪಾನಮತ್ತರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಸೂಕ್ತ ರಕ್ಷಣೆ ಕೊಡಿ ಎಂದು ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದಾದ್ಯಂತ 2 ತಿಂಗಳಿನಿಂದ ಅವಿರತ ಸೇವೆಯಲ್ಲಿರುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನ ಹೆಚ್ಚಾಗುತ್ತಿರುವುದು ಆಶಾ ಸಮುದಾಯಕ್ಕೆ ಭಯ, ಆತಂಕ ಉಂಟು ಮಾಡಿದೆ. ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರನ್ನು ಉಗ್ರ ಶಿಕ್ಷೆಗೆ ಒಳಪಡಸಬೇಕು ಎಂದು ಮನವಿ ಮಾಡಿದರು.
ಕೋವಿಡ್ – 19 ಕಾರ್ಯ ನಿಯೋಜನೆ ಮುಗಿಯವವರೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಮಾಸಿಕ ₹10 ಸಾವಿರ ನೀಡಬೇಕು, ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್ಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಜಿ.ಪುಷ್ಪಲತಾ, ಜಯಂತಿ ಇದ್ದರು.