ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ 9 ಜನ 720ಕ್ಕೆ 720 ಅಂಕ ಪಡೆದಿದ್ದಾರೆ. ಇವರಿಗೆ ನೀಡಿರುವ ಕೃಪಾಂಕ ಗೊಂದಲಕ್ಕೆ ಕಾರಣವಾಗಿದೆ. ಕಷ್ಟಪಟ್ಟು ಪರೀಕ್ಷೆ ಬರೆದು ರ್ಯಾಂಕ್ ಗಳಿಸಿದವರನ್ನು ಅನುಮಾನದಿಂದ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿಗಳ ನೈತಿಕ ಸ್ಥೈರ್ಯ ಕುಸಿದಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಮತ್ತಷ್ಟು ಹೆಚ್ಚಾಗದಂತೆ ಸರ್ಕಾರ ತಕ್ಷಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.