ತಾಲ್ಲೂಕಿನಲ್ಲಿ ರಾಗಿಯನ್ನು ಹೆಚ್ಚಾಗಿ ಬಿತ್ತನೆ ಮಾಡಲಾಗಿದೆ. ರೈತರು ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದರು. ಆದರೆ, ಮಳೆಯಿಂದಾಗಿ ಬೆಳೆದು ನಿಂತಿದ್ದ ರಾಗಿ ಬೆಳೆಯು ಚಾಪೆ ಹಾಸಿದಂತೆ ಬಿದ್ದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಇನ್ನೂ ಕೆಲವು ದಿನ ಇದೇ ರೀತಿ ಮಳೆ ಮುಂದುವರಿದರೆ ಬೆಳೆ ಪಡೆದುಕೊಳ್ಳಲು ಕಷ್ಟವಾಗುತ್ತದೆ ಎಂಬುದು ರೈತರ ಅಳಲು.