<p><strong>ತುಮಕೂರು:</strong> ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸುತ್ತಿರುವ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಿಂದ ಮಾರ್ಚ್ 15ರ ಒಳಗೆ ಬಸ್ಗಳ ಸಂಚಾರ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.</p>.<p>₹111.25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಿಲ್ದಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು. ಬಾಕಿ ಉಳಿದಿರುವ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ಣಗೊಳಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ನಿಲ್ದಾಣ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ದೇವರಾಜ ಅರಸು ಹೆಸರು ನಾಮಕರಣ ಸಹ ಮಾಡಿದ್ದರು. ಉದ್ಘಾಟನೆ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡಿರಲಿಲ್ಲ.</p>.<p>ರಿಂಗ್ ರಸ್ತೆ: ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೆತ್ತಿಕೊಂಡಿರುವ ನಗರದ ದಿಬ್ಬೂರು ಜಂಕ್ಷನ್ನಿಂದ ಶಿರಾಗೇಟ್ ವರೆಗಿನ 1.5 ಕಿ.ಮೀ ದೂರದ ರಿಂಗ್ ರಸ್ತೆ ಕಾಮಗಾರಿ ನಿಧಾನವಾಗಿರುವುದಕ್ಕೆ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಚುರುಕುಗೊಳಿಸಬೇಕು. ಈ ಬಗ್ಗೆ ಪ್ರತಿ ದಿನವೂ ವರದಿ ಸಲ್ಲಿಸುವಂತೆ ಟೂಡಾ ಆಯುಕ್ತೆ ಬಸಂತಿ ಅವರಿಗೆ ನಿರ್ದೇಶಿಸಿದರು.</p>.<p>ಮಾಹಿತಿ ನೀಡಿದ ಲೋಕೋಪಯೋಗಿ ಎಂಜಿನಿಯರ್ ಸಿದ್ದಪ್ಪ, ‘ಕಳೆದ ವರ್ಷ ಮಳೆಯಿಂದಾಗಿ ಸೇತುವೆ ನಿರ್ಮಿಸಲು ಸಾಧ್ಯವಾಗಲಿಲ್ಲ. ₹9.60 ಕೋಟಿಯಲ್ಲಿ ರಸ್ತೆ, ₹4 ಕೋಟಿ ಮೊತ್ತದಲ್ಲಿ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನೆರಡು ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸುತ್ತಿರುವ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದಿಂದ ಮಾರ್ಚ್ 15ರ ಒಳಗೆ ಬಸ್ಗಳ ಸಂಚಾರ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.</p>.<p>₹111.25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಿಲ್ದಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು. ಬಾಕಿ ಉಳಿದಿರುವ ಸಣ್ಣ ಪುಟ್ಟ ಕೆಲಸಗಳನ್ನು ಪೂರ್ಣಗೊಳಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ನಿಲ್ದಾಣ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ದೇವರಾಜ ಅರಸು ಹೆಸರು ನಾಮಕರಣ ಸಹ ಮಾಡಿದ್ದರು. ಉದ್ಘಾಟನೆ ಸಮಯದಲ್ಲಿ ಕಾಮಗಾರಿ ಪೂರ್ಣಗೊಂಡಿರಲಿಲ್ಲ.</p>.<p>ರಿಂಗ್ ರಸ್ತೆ: ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೆತ್ತಿಕೊಂಡಿರುವ ನಗರದ ದಿಬ್ಬೂರು ಜಂಕ್ಷನ್ನಿಂದ ಶಿರಾಗೇಟ್ ವರೆಗಿನ 1.5 ಕಿ.ಮೀ ದೂರದ ರಿಂಗ್ ರಸ್ತೆ ಕಾಮಗಾರಿ ನಿಧಾನವಾಗಿರುವುದಕ್ಕೆ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಚುರುಕುಗೊಳಿಸಬೇಕು. ಈ ಬಗ್ಗೆ ಪ್ರತಿ ದಿನವೂ ವರದಿ ಸಲ್ಲಿಸುವಂತೆ ಟೂಡಾ ಆಯುಕ್ತೆ ಬಸಂತಿ ಅವರಿಗೆ ನಿರ್ದೇಶಿಸಿದರು.</p>.<p>ಮಾಹಿತಿ ನೀಡಿದ ಲೋಕೋಪಯೋಗಿ ಎಂಜಿನಿಯರ್ ಸಿದ್ದಪ್ಪ, ‘ಕಳೆದ ವರ್ಷ ಮಳೆಯಿಂದಾಗಿ ಸೇತುವೆ ನಿರ್ಮಿಸಲು ಸಾಧ್ಯವಾಗಲಿಲ್ಲ. ₹9.60 ಕೋಟಿಯಲ್ಲಿ ರಸ್ತೆ, ₹4 ಕೋಟಿ ಮೊತ್ತದಲ್ಲಿ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನೆರಡು ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>