ಗಡಿನಾಡ ಶಾಲೆಗಳಿಗೆ ₹ 1.30 ಕೋಟಿ ಅನುದಾನ: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ್ ಅವರಲ್ಲಿ ಮನವಿ ಮಾಡಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ₹ 1.30 ಕೋಟಿ ಅನುದಾನ ಪಡೆಯಲಾಗಿದೆ. ಈ ಅನುದಾನದಲ್ಲಿ ಶಿರಾ ತಾಲ್ಲೂಕಿನ ಹಲವು ಶಾಲೆಗಳು ಹಾಗೂ ಚಳ್ಳಕೆರೆ, ಗೌರಿಬಿದನೂರು, ಮಧುಗಿರಿ ಸೇರಿದಂತೆ ಆಗ್ನೇಯ ಪದವೀಧರ ಕ್ಷೇತ್ರದ ಹಲವು ಶಾಲೆಗಳಿಗೆ ಅನುದಾನ ನೀಡಲಾಗುವುದು ಎಂದರು.